ಬೆಂಗಳೂರು: ಬಡ್ಡಿ ಹಣಕ್ಕಾಗಿ (Usury Money) ದುಷ್ಕರ್ಮಿಯೊಬ್ಬಾತ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಘಟನೆಯೊಂದು ಬೆಂಗಳೂರಿನ (Bengaluru) ಕಾಕ್ಸ್ಟೌನ್ ದೊಡ್ಡಗುಂಟೆ (Doddagunte) ಹತ್ತಿರ ನಡೆದಿದೆ.
ಅಜಿತ್ (35) ಕೊಲೆಯಾದ ವ್ಯಕ್ತಿ. ಕೊಲೆಯಾಗಿರುವ ಅಜಿತ್ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಈತ ಎಂದಿನಂತೆ ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬರುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿ ಆತನ ಮನೆಯ ಮುಂಭಾಗದಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಬಡ್ಡಿ ಹಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಅಜಿತ್ ವ್ಯಕ್ತಿಯೊಬ್ಬರಿಂದ ಅಧಿಕ ಬಡ್ಡಿಗೆ ಹಣ ಪಡೆದಿದ್ದರು. ಬಡ್ಡಿ ಹಣ ಮತ್ತು ಅಸಲು ಹಣ ಮರಳಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಮತ್ತು ಅಜಿತ್ ನಡುವೆ ಗಲಾಟೆ ಆಗುತ್ತಿತ್ತು. ಆದರೆ, ಅಜಿತ್ ಮನೆಗೆ ಬರೋದನ್ನೇ ಕಾದು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಪುಲಿಕೇಶಿ ನಗರ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.