ಕೊಪ್ಪಳ: ವಿದ್ಯಾರ್ಥಿನಿಯನ್ನು ಅಪಹರಿಸಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿನಿಯನ್ನು ಅಪಹರಿಸಿ ಕೊಪ್ಪಳಕ್ಕೆ ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಸದ್ಯ ಆರೋಪಿಗಳಾದ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಯುವತಿಯು ಕಾಲೇಜಿನಲ್ಲಿ ಬಿಕಾಂ ಪರೀಕ್ಷೆ ಬರೆಯುತ್ತಿದ್ದಳು. ಈ ಸಂದರ್ಭದಲ್ಲಿ ಅಣ್ಣ ಬಂದಿರುವುದಾಗಿ ಹೇಳಿ, ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಹೊರಗೆ ಕರೆದು ಕಿಡ್ನಾಪ್ ಮಾಡಿ ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಅಂತರಾಳ ಕೆಫೆ ಹೋಟೆಲ್ಗೆ ಕರೆತಂದಿದ್ದಾರೆ.
ನಂತರ ಬಿಯರು ಕುಡಿಸಿ ಮತ್ತು ಬರಿಸಿದ ಆರೋಪಿಗಳು, ಸ್ನೇಹಿತ ಸೇರಿದಂತೆ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸಂತ್ರಸ್ತ ಯುವತಿ ಕೌಲ್ ಬಜಾರ್ನ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡದ್ದಾರೆ.