ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಬಿಎಂಪಿ ಶಾಲೆಗಳ ಸ್ಥಿತಿ ಗತಿ ಅಧ್ಯಯನಕ್ಕೆ ಆಮ್ ಆದ್ಮಿ ಪಕ್ಷದಿಂದ ಸಮಿತಿ ರಚನೆ

Mahesh M Dhandu by Mahesh M Dhandu
December 10, 2020
in Newsbeat, Samagra karnataka, ರಾಜ್ಯ
aam admi party
Share on FacebookShare on TwitterShare on WhatsappShare on Telegram

ಬಿಬಿಎಂಪಿ ಶಾಲೆಗಳ ಸ್ಥಿತಿ ಗತಿ ಅಧ್ಯಯನಕ್ಕೆ ಆಮ್ ಆದ್ಮಿ ಪಕ್ಷದಿಂದ ಸಮಿತಿ ರಚನೆ

ಇಡೀ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಿ, ಶಾಲೆಗಳನ್ನು ಭೂತ ಬಂಗಲೆಗಳಾಗಿ ಪರಿವರ್ತಿಸಿರುವ ಸರ್ಕಾರ ಹಾಗೂ ಬಿಬಿಎಂಪಿ ಕಾರ್ಯವೈಖರಿಯನ್ನು ಬಯಲು ಮಾಡಲು ಆಮ್ ಆದ್ಮಿ ಪಕ್ಷದಿಂದ ಸಮಿತಿ ರಚನೆ ಮಾಡಲಾಗಿದೆ.

Related posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 18, 2026
kiccha-sudeep-billa-ranga-baasha-brb-special-poster-released-birthday

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

September 18, 2026

ಈ ಸಮಿತಿಯು ಎಲ್ಲಾ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಮಾಹಿತಿ ನೀಡಿದರು.

ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ನಗರ ಯೋಜನಾ ತಜ್ಞ ಅಶ್ವಿನ್ ಮಹೇಶ್ ಅವರ ಮಾರ್ಗದರ್ಶನದಲ್ಲಿ, ಮುಖ್ಯ ವಕ್ತಾರ ಶರತ್ ಖಾದ್ರಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 91 ಶಿಶುವಿಹಾರ, 15 ಪ್ರಾಥಮಿಕ ಶಾಲೆಗಳು, 32 ಪ್ರೌಡ ಶಾಲೆಗಳು, 4 ಪದವಿ, 2 ಸ್ನಾತಕೋತ್ತರ ಪದವಿ ಸೇರಿ ಒಟ್ಟು 159 ಶಿಕ್ಷಣ ಸಂಸ್ಥೆಗಳು ಇವೆ. ಇವುಗಳನ್ನು ವಿಭಾಗವಾರು ಅಧ್ಯಯನಕ್ಕೆ ಒಳಪಡಿಸಲಾಗುವುದು ಎಂದು ಹೇಳಿದರು.

ಇಲ್ಲಿದೆ ಹೊಸ ಸಂಸತ್ ಭವನದ ಇಂಚಿಂಚು ಮಾಹಿತಿ..

ಆಮ್ ಆದ್ಮಿ ಪಕ್ಷದ ನಿಯೋಗ ಇಂತಹ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯ, ಕಲಿಕಾ ವಾತಾವರಣ, ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ ಹಾಗೂ ಶಿಕ್ಷಕರ ಭೋದನಾ ಸಾಮರ್ಥ್ಯದ ಬಗ್ಗೆ ಸಮೀಕ್ಷೆ ನಡೆಸಲಿದೆ.

ಈ ಶಾಲೆಗಳ ಅಭಿವೃದ್ಧಿಗೆ ಕಳೆದ 10 ವರ್ಷಗಳಲ್ಲಿ ಖರ್ಚು ಮಾಡಿರುವ ಹಣ, ಅನುದಾನ, ದಾನಿಗಳ ನೆರವು ಸೇರಿದಂತೆ ಯಾವ, ಯಾವ ಮೂಲದಿಂದ ಹಣಕಾಸಿನ ಸಹಾಯ ದೊರೆತಿದೆ ಎನ್ನುವುದನ್ನು ಸಹ ಅಧ್ಯಯನ ಮಾಡಲಾಗುವುದು.

  aam admi party

ಇದೆಲ್ಲದಕ್ಕಿಂತ ಮುಖ್ಯವಾಗಿ ಬಿಬಿಎಂಪಿ ಶಾಲೆಗಳಿಗೆ ಬರುವ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪೋಷಕರ ಹಾಗೂ ಮಕ್ಕಳಿಗೆ ಶಾಲೆಯ ಸ್ಥಿತಿಗತಿಗಳ ಬಗ್ಗೆ ಪ್ರಶ್ನೋತ್ತರಗಳನ್ನು ಕೇಳಿ ಪಡೆಯಲಾಗುವುದು ಹಾಗೂ ಶಿಕ್ಷಕರ ಪೋಷಕರ ನಡುವಿನ ಬಾಂಧವ್ಯ, ಕಳೆದ ಹತ್ತು ವರ್ಷಗಳಲ್ಲಿ ಶಾಲೆಯ ಫಲಿತಾಂಶ, ಹಾಜರಾತಿ, ನೂತನ ಕಲಿಕಾ ವಿಧಾನಗಳ ಅಳವಡಿಕೆ ಮಾಡಲಾಗಿದೆಯೇ, ಗ್ರಂಥಾಲಯ, ಆಟದ ಮೈದಾನ, ಪಠ್ಯೇತರ ಚಟುವಟಿಕೆಗಳು, ಕಲಿಕಾ ಸಾಧನಗಳು, ಲ್ಯಾಬ್, ಕಂಪ್ಯೂಟರ್‌ ಶಿಕ್ಷಣ, ಇತರೇ ಕೌಶಲಗಳಿಗೆ ಹೇಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎನ್ನುವುದನ್ನು ಈ ಸಮಿತಿ ಅಧ್ಯಯನ ನಡೆಸಲಿದೆ ಎಂದರು.

ಯಾರ ಒತ್ತಡಕ್ಕೆ ಒಳಗಾಗಿ ಅತ್ಯಂತ ಮೂಲಭೂತ ಅವಶ್ಯಕತೆಯಾದ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಿ ಜನ ಸಾಮಾನ್ಯರಿಗೆ ಸುಲಭವಾಗಿ ಎಟಕುವಂತಹ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಲಾಗಿದೆ ಎನ್ನುವುದೇ ನಮ್ಮ ಮುಂದಿರುವ ಪ್ರಶ್ನೆ.

ಅತ್ಯುತ್ತಮವಾಗಿದ್ದ ನಮ್ಮ ಕರ್ನಾಟಕದ ಶಿಕ್ಷಣ ವ್ಯವಸ್ಥೆ ರಾಜಧಾನಿಯಲ್ಲೇ ಕೊಳೆಯುತ್ತಾ ಇದೆ. ಬೆಂಗಳೂರಿನ ಅನೇಕ ಶಾಲೆಗಳು ಹಂದಿ ಗೂಡಿಗಿಂತ ಕಡೆಯಾಗಿವೆ.

ಕೆಲವು ಶಾಲೆಗಳನ್ನ ಖಾಸಗಿಯವರಿಗೆ ದತ್ತು ಕೊಟ್ಟು ಸರ್ಕಾರ ಹಾಗೂ ಬಿಬಿಎಂಪಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಸರ್ಕಾರಿ ಶಾಲೆಗಳ ಜಾಗಗಳನ್ನು ಕಬಳಿಸಲಾಗಿದೆ, ಬೇಕಂತಲೇ ಹಾಳು ಗೆಡವಲಾಗಿದೆ ಹೀಗೆ ಸಮಸ್ಯೆಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ ಎಂದು ಕಿಡಿ ಕಾರಿದರು.

ಪತ್ರಿಕಾ ಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷ ಬೆಂಗಳೂರು ಯುವ ಘಟಕದ ಅಧ್ಯಕ್ಷ ಚಿನ್ಮಯ್ ನಾಡಿಗ್ ಉಪಸ್ಥಿತರಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: aam admi partybangalorekarnataka
ShareTweetSendShare
Join us on:

Related Posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 18, 2026
0

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ...

kiccha-sudeep-billa-ranga-baasha-brb-special-poster-released-birthday

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

by admin
September 18, 2026
0

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ. ಬ್ಲಾಕ್‌ಬಸ್ಟರ್ 'ವಿಕ್ರಾಂತ್ ರೋಣ'...

kiccha-sudeep-p-samuthirakani-school-bus-movie-first-look-released

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಖ್ಯಾತ ತಮಿಳು ನಿರ್ದೇಶಕ ಹಾಗೂ ನಟ ಪಿ. ಸಮುದ್ರಖನಿ ಅವರ ಮುಂಬರುವ ‘ಸ್ಕೂಲ್ ಬಸ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ...

kiccha-sudeep-devaraya-movie-announcement-birthday-gift-peoples-media-factory

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ...

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram