ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಷ್ಟ್ರಪತಿ ಜೊತೆ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ಎಎಪಿ ಮನವಿ

Mahesh M Dhandu by Mahesh M Dhandu
September 24, 2022
in Newsbeat, State, ಬೆಂಗಳೂರು
AAP appeals to the Governor

AAP appeals to the Governor

Share on FacebookShare on TwitterShare on WhatsappShare on Telegram

ರಾಷ್ಟ್ರಪತಿ ಜೊತೆ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ಎಎಪಿ ಮನವಿ

ಬೆಂಗಳೂರು : ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

February 11, 2026

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ, “ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿ ರಾಜರುಗಳು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅವರು ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು” ಎಂದು ಹೇಳಿದರು.

“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.

AAP appeals to the Governor
AAP appeals to the Governor

ಇದೇ ಸಂದರ್ಭದಲ್ಲಿ ಹಾಜರಿದ್ದ ಸಂಘಟನ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡುತ್ತಾ “ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ. 29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್‌ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.

ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು ,ವಿಶ್ವನಾಥ್, ವೇಣುಗೋಪಾಲ್ ,ಮಹೇಶ್ ಬಾಬು ಸೇರಿದಂತೆ ಇನ್ನಿತರರು ಹಾಜರಿದ್ದರು

Tags: #Saaksha TVaapGovernorsomasekhar
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

ದೆಹಲಿಯಲ್ಲಿ ದೋಸ್ತಿ ಕರುನಾಡಿನಲ್ಲಿ ಕುಸ್ತಿ: ಮೈತ್ರಿ ವಿರುದ್ಧ ಸಿಡಿದೆದ್ದ ಕಮಲ ಕಲಿಗಳು

by Shwetha
February 11, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram