ಕೆಎಎಸ್ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ
ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಕೆಎಎಸ್ ಅಧಿಕಾರಿ ರಂಗನಾಥಸ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಂಗನಾಥ್ ಅವರಿಗೆ ಸೇರಿದ 5 ಮನೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ. ರಂನಾಥ್ , ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮಗಳ ಪ್ರಧಾನ ವ್ಯವಸ್ಥಾಪಕರಾಗಿದ್ದಾರೆ. ಈ ಹಿಂದೆ ಬೆಂಗಳೂರಿನ ಉತ್ತರ ತಾಲೂಕು ಉಪನೊಂದಣಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಗೋಮಾಳ ಜಮೀನನ್ನು ನಿಯಮ ಬಾಹಿರವಾಗಿ ಖಾಸಗಿ ಯವರಿಗೆ ಪರಭಾರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಸಿಬಿ ಕೋರ್ಟ್ ಸೂಚನೆ ಮೇರೆಗೆ ಎಫ್ಐಆರ್ ದಾಖಲಿಸಿತ್ತು.
ನ್ಯಾಯಾಂಗ ಬಡಾವಣೆಯಲ್ಲಿರುವ ವಾಸದ ಮನೆ, ನಾಗರಬಾವಿಯಲ್ಲಿರುವ ಸಂಬಂಧಿಕರ ಮನೆ, ದೊಡ್ಡ ಬಳ್ಳಾಪುರದಲ್ಲಿರುವ ಕಲ್ಯಾಣ ಮಂಟಪ ಮತ್ತು ಟೌನ್ ಕನಕ ಶ್ರೀ ಟ್ರಸ್ಟ್ ಕಚೇರಿ, ಅಕ್ಷರ ಪಬ್ಲಿಕ್ ಸ್ಕೂಲ್, ಉತ್ತರ ತಾಲೂಕು ವಿಭಾಗದ ಕಚೇರಿ, ಮೇಲೆ ದಾಳಿ ಮಾಡಲಾಗಿದೆ. 42 ಎಸಿಬಿ ಅಧಿಕಾರಿಗಳು 5 ತಂಡಗಳಾಗಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.