ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಅಪಘಾತ : ಸ್ಥಿತಿ ಗಂಭೀರ
ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಬೈಕ್ ಅಪಘಾತಕ್ಕೀಡಾಗಿದ್ದು, ವಿಜಯ್ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಸದ್ಯ ಅವರಿಗೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ರಾತ್ರಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದ್ದು, ವಿಜಯ್ ಅವರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
ಅಪಘಾತವಾದ ಕೂಡಲೇ ವಿಜಯ್ ಅವರನ್ನ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆಗ ಅವರ ಸ್ಥಿತಿ ಗಂಭೀರವಾಗಿತ್ತು.
ಹೀಗಾಗಿ ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿರುವು ಗೊತ್ತಾಗಿದೆ. ಹೀಗಾಗಿ ಅವರಿಗೆ ಮೆದುಳಿನ ಆಪರೇಷನ್ ನೆರವೇರಿಸಲಾಗಿದೆ.