ಉತ್ತರ ಕನ್ನಡ: ಬಂದರಿನಲ್ಲಿ ನಿಲ್ಲಿಸಿದ್ದ ಬೋಟ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭಟ್ಕಳ ಬಂದರಿನಲ್ಲಿ ನಿಲ್ಲಿಸಿದ್ದ ಬೋಟ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಬೋಟ್ ನರಸಿಂಹ ಗೋವಿಂದ ಖಾರ್ವಿ ಎಂಬುವವರಿಗೆ ಸೇರಿದ್ದಾಗಿದೆ ಎನ್ನಲಾಗಿದೆ.
ಈ ಬೋಟ್ ನ್ನು ದುರಸ್ಥಿ ಮಾಡುವ ಉದ್ಧೇಶದಿಂದ ಕಳೆದ ಮೂರು ವರ್ಷಗಳಿಂದ ಬಂದರಿನಲ್ಲಿ ನಿಲ್ಲಿಸಲಾಗಿತ್ತು. ಆದರೆ, ಆಕಸ್ಮಿಕ ಈ ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.