ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜೋತಿಷ್ಯದ ಪ್ರಕಾರ ಸೂರ್ಯ ಗ್ರಹಣ ಸಮಯದಲ್ಲಿ ಗರ್ಭಿಣಿಯರು ಯಾವ ಕ್ರಮವನ್ನು ಅನುಸರಿಸಬೇಕು? ಮುನ್ನೆಚ್ಚರಿಕೆಯಾಗಿ ಯಾವ ಮಂತ್ರ ಪಠಿಸಿಬೇಕು !!

Shwetha by Shwetha
June 9, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
According to astrology, what steps should pregnant women take during eclipse
Share on FacebookShare on TwitterShare on WhatsappShare on Telegram

ಜೋತಿಷ್ಯದ ಪ್ರಕಾರ ಸೂರ್ಯ ಗ್ರಹಣ ಸಮಯದಲ್ಲಿ ಗರ್ಭಿಣಿಯರು ಯಾವ ಕ್ರಮವನ್ನು ಅನುಸರಿಸಬೇಕು? ಮುನ್ನೆಚ್ಚರಿಕೆಯಾಗಿ ಯಾವ ಮಂತ್ರ ಪಠಿಸಿಬೇಕು !!

ಸೂರ್ಯ ಗ್ರಹಣ ಎಂದರೇನು?
ವೈಜ್ಞಾನಿಕ ತುಲನೆಯ ಪ್ರಕಾರ ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರನು ಬಂದಾಗ ಗ್ರಹಣವು ಸಂಭವಿಸುತ್ತದೆ. ಆಗ ಭೂಮಿಯು ಸೂರ್ಯನ ಬೆಳಕನ್ನು ಕಳೆದುಕೊಂಡು ಕತ್ತಲನ್ನು ಅನುಭವಿಸುವುದು. ಈ ಒಂದು ವೈಜ್ಞಾನಿಕ ವಿದ್ಯಮಾನವನ್ನೇ ಗ್ರಹಣ ಎಂದು ಪರಿಗಣಿಸಲಾಗುತ್ತದೆ. ಭೂಮಿಯು ಸೂರ್ಯನ ಬೆಳಕನ್ನು ಕಳೆದುಕೊಳ್ಳುವುದರಿಂದ ಅನೇಕ ಸಂಗತಿಗಳು ಸಂಭವಿಸುತ್ತವೆ. ಅದು ಜೀವ ಸಂಕುಲಗಳಿಗೆ ಒಂದು ಆಘಾತಕಾರಿ ಸಂಗತಿಯೂ ಹೌದು ಎಂದು ವೈಜ್ಞಾನಿಕವಾಗಿ ಮತ್ತು ಧಾರ್ಮಿಕವಾಗಿಯೂ ಹೇಳಲಾಗುವುದು. ಇಂತಹ ಒಂದು ಅನುಚಿತ ಸಂಗತಿಗಳು ಉಂಟಾದ ಸಮಯದಲ್ಲಿ ಗರ್ಭಿಣಿಯರಿಗೆ ಸಾಕಷ್ಟು ತೊಡಕಾಗುವ ಸಾಧ್ಯತೆಗಳು ಹೆಚ್ಚು.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಗರ್ಭಾವಸ್ಥೆಯಲ್ಲಿ ಇರುವಾಗ ಸೂರ್ಯ ಗ್ರಹಣ
ಗರ್ಭಾವಸ್ಥೆಯಲ್ಲಿ ಇರುವಾಗ ಸೂರ್ಯ ಗ್ರಹಣ ಸಂಭವಿಸಿದರೆ ಹಾನಿಕಾರಕವಾಗಿರುತ್ತದೆಯೇ? ಎನ್ನುವ ಗೊಂದಲ ಅನೇಕರಲ್ಲಿ ಇರುತ್ತದೆ. ವೈಜ್ಞಾನಿಕವಾಗಿ ಉಂಟಾಗುವ ಸೂರ್ಯ ಗ್ರಹಣದಿಂದ ಗರ್ಭಧಾರಣೆಯ ಮೇಲೆ ಪರಿಣಾಮ ಬೀರಬಹುದು ಅಥವಾ ಹುಟ್ಟಲಿರುವ ಮಗುವಿಗೆ ಹಾನಿಯಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ನಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣವು ಗರ್ಭಾವಸ್ಥೆಯಲ್ಲಿರುವ ಮಹಿಳೆಯರಿಗೆ ಹಗೂ ಮಗುವಿಗೆ ಅತ್ಯಂತ ಆಘಾತಕಾರಿಯಾದ ಸಂಗತಿ ಎಂದು ಹೇಳಲಾಗುವುದು.

ಗರ್ಭಾವಸ್ಥೆಯು ಮಹಿಳೆಯರಿಗೆ ಅತ್ಯಂತ ಸೂಕ್ಷ್ಮವಾದ ಮತ್ತು ಮಹತ್ವದ ಸಮಯವಾಗಿರುತ್ತದೆ. ಆ ಸಮಯದಲ್ಲಿ ಗರ್ಭಿಣಿಯರು ಗರ್ಭಾವರ್ಸತೆಗೆ ಸಂಬಂಧಿಸಿದ ವೈದ್ಯಕೀಯ ಮಾರ್ಗದರ್ಶನದ ಜೊತೆಗೆ ಧಾರ್ಮಿಕವಾಗಿ ಆಚರಿಸುವ ಕೆಲವು ಸಂಗತಿಗಳ ಬಗ್ಗೆಯೂ ಹೆಚ್ಚು ಜಾಗರೂಕರಾಗಿರುವ ಅವಧಿಯಾಗಿರುತ್ತದೆ. ಅದಕ್ಕಾಗಿಯೇ ಗರ್ಭಾವಸ್ಥೆಯಲ್ಲಿ ಸೂರ್ಯ ಗ್ರಹಣವು ಹಾನಿಕಾರಕವಾಗಿದೆ ಎಂದು ಹೇಳಲಾಗುವುದು.

ಸೂರ್ಯ ಗ್ರಹಣ ಮತ್ತು ಜ್ಯೋತಿಷ್ಯದ ಮಹತ್ವ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನೀಚ ಗ್ರಹಗಳಾದ ರಾಹು ಅಥವಾ ಕೇತುವಿನ ನೆರಳು ಸೂರ್ಯನ ಮೇಳೆ ಬಿದ್ದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಎರಡು ಗ್ರಹಗಳು ರಾಕ್ಷಸ ಗ್ರಹಗಳು. ಈ ಗ್ರಹವನ್ನು ಸೂರ್ಯನ ಬೆಳಕನ್ನು ಭೂಮಿಗೆ ಬೀಳದಂತೆ ನಿರ್ಬಂಧಿಸಿದಾಗ ಗ್ರಹಣ ಉಂಟಾಗುವುದು. ಸೂರ್ಯನ ಬೆಳಕನ್ನು ಕಳೆದುಕೊಂಡ ಭೂಮಿಗೆ ಹಾಗೂ ಭೂಮಿಯಲ್ಲಿರುವ ಜೀವ ಸಂಕುಲಕ್ಕೆ ಹಾನಿ ಉಂಟಾಗುವುದು ಎಂದು ಹೇಳಲಾಗುವುದು. ಖಗೋಳದಲ್ಲಿ ಇರುವ ಕೇತು ಮತ್ತು ರಾಹಿ ಎನ್ನುವ ಗ್ರಹಗಳು ಬಹಳ ಶಕ್ತಿಶಾಲಿ ಗ್ರಹಗಳು ಎಂದು ನಂಬಲಾಗಿದೆ. ಗ್ರಹಣದ ಸಮಯದಲ್ಲಿ ಉಂಟಾಗುವ ಈ ಗ್ರಹಗಳ ಪ್ರಭಾವವು ಗರ್ಭಾವಸ್ಥೆಯಲ್ಲಿರುವ ಮಹಿಳೆಯರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಹೇಳಲಾಗುವುದು. ಹಾಗಾಗಿ ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಮನೆಯಿಂದ ಆಚೆ ಹೋಗದೆ ಆದಷ್ಟು ಜಾಗರೂಕರಾಗಿ ಇರಬೇಕು.

ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಕೈಗೊಳ್ಳಬೇಕಾದ ಕ್ರಮಗಳು
ಗರ್ಭಾವಸ್ಥೆಯಲ್ಲಿ ಇರುವ ಮಹಿಳೆಯರ ಆರೋಗ್ಯವು ಅತ್ಯಂತ ಸೂಕ್ಷ್ಮತೆಯಿಂದ ಕೂಡಿರುತ್ತವೆ. ಅವರ ಆರೋಗ್ಯದಲ್ಲಿ ಉಂಟಾಗುವ ಸಣ್ಣ-ಪುಟ್ಟ ಬದಲಾವಣೆಗಳು ಸಹ ಗರ್ಭದಲ್ಲಿ ಇರುವ ಮಗುವಿನ ಮೇಲೆ ಉಂಟಾಗುತ್ತದೆ. ಗ್ರಹಣದ ಸಮಯದಲ್ಲಿ ಪರಿಸರವು ಸಂಪೂರ್ಣವಾಗಿ ಕಲುಷಿತಗೊಳ್ಳುತ್ತವೆ. ಅಂತಹ ಸಮಯದಲ್ಲಿ ಗರ್ಭಿಣಿಯರು ಹೆಚ್ಚು ಕಾಳಜಿಯಿಂದ ಇರಬೇಕು. ಇಲ್ಲವಾದರೆ ವಿಷಪೂರಕ ಕಿರಣ ಹಾಗೂ ಗಾಳಿಗಳು ಮಗುವಿನ ಆರೋಗ್ಯದ ಮೇಲೂ ಪ್ರಭಾವ ಬೀರುತ್ತವೆ. ಹಾಗಾದರೆ ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಯಾವ ರೀತಿಯ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕು? ಎನ್ನುವುದನ್ನು ತಿಳಿಯೋಣ ಬನ್ನಿ…

ಗ್ರಹಣದ ಸಮಯದಲ್ಲಿ ಮನೆಯ ಒಳಗೆ ಇರಬೇಕು
ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಆದಷ್ಟು ಮನೆಯ ಒಳಾಂಗಣದಲ್ಲಿಯೇ ಇರಬೇಕು. ಮನೆಯ ಹೊರಗೆ ಉಳಿದರೆ ಹುಟ್ಟಲಿರುವ ಮಗುವಿನ ಮುಖವು ವಿಕಾರತೆಯಿಂದ ಹಾಗೂ ಕೆಲವು ಅನುಚಿತ ಜನ್ಮ ಗುರುತುಗಳು ಉಂಟಾಗುತ್ತವೆ ಎಂದು ನಂಬಲಾಗಿದೆ. ಗ್ರಹಣದ ಸಮಯದಲ್ಲಿ ಹೊರಗೆ ಉಳಿದರೆ ಮಗುವಿಗೆ ಸೀಳು ತುಟಿಯಂತಹ ಅನೇಕ ಆರೋಗ್ಯ ಸಮಸ್ಯೆಗಳು ಜನ್ಮದಿಂದಲೇ ಕಾಣಿಸಿಕೊಳ್ಳುವುದು. ಹಾಗೊಮ್ಮೆ ಮನೆಯಿಂದ ಹೊರಗೆ ಬಂದರೆ ದೀರ್ಘ ಸಮಯಗಳ ಕಾಲ ಹೊರಗೇ ಇರಬಾರದು ಎಂದು ಹೇಳಲಾಗುವುದು.

ಬರಿ ಕಣ್ಣಿನಿಂದ ಸೂರ್ಯ ಗ್ರಹಣದ ವೀಕ್ಷಣೆ
ಗರ್ಭಿಣಿಯರು ಸೂರ್ಯ ಗ್ರಹಣವನ್ನು ಬರೀ ಕಣ್ಣಿನಿಂದ ನೋಡಬಾರದು. ಸಾಮಾನ್ಯವಾಗಿ ಬರಿ ಕಣ್ಣಿನಲ್ಲಿ ಸೂರ್ಯನನ್ನು ನೋಡಿದರೆ ಕಣ್ಣಿನ ರೆಟಿನಾ ಹಾಳಾಗುವುದು ಜೊತೆಗೆ ಮಗುವಿನ ಆರೋಗ್ಯದ ಮೇಲೆ ನೇರವಾಗಿ ದುಷ್ಪರಿಣಾಮ ಉಂಟಾಗುವುದು ಎಂದು ಹೇಳಲಾಗುವುದು.

ತೀಕ್ಷ್ಣವಾದ ವಸ್ತುಗಳನ್ನು ಬಳಸದಿರಿ
ಗರ್ಭಾವಸ್ಥೆಯಲ್ಲಿ ಇರುವಾಗ ಗ್ರಹಣ ಸಂಭವಿಸಿದರೆ, ಅಂತಹ ಸಮಯದಲ್ಲಿ ಗರ್ಭಿಣಿಯರು ಚೂಪಾದ ವಸ್ತುಗಳಾದ ಸೂಜಿ, ಚಾಕೂ, ಪಿನ್‍ಗಳನ್ನು ಬಳಸಬಾರದು. ಇಂತಹ ಸೂಕ್ಷ್ಮ ಅಥವಾ ತೀಕ್ಷ್ಣವಾದ ವಸ್ತುಗಳನ್ನು ಬಳಸುವುದರಿಂದ ಮಗುವಿಗೆ ಜನ್ಮ ದೋಷ ಉಂಟಾಗುವುದು ಎನ್ನುವ ನಂಬಿಕೆಯಿದೆ.

ನಿದ್ರೆ ಮಾಡಬಾರದು
ಗ್ರಹಣದ ಸಮಯವು ಕಲುಷಿತ ಅಥವಾ ದೋಷದಿಂದ ಕೂಡಿರುವ ಸಮಯವಾಗಿರುತ್ತದೆ. ಅಂತಹ ಸಮಯದಲ್ಲಿ ಗರ್ಭಿಣಿಯರು ಮಲಗಗಾರದು. ಅದು ಹುಟ್ಟಲಿರುವ ಮಗುವಿಗೆ ಕೆಟ್ಟ ಪರಿಣಾಮವನ್ನು ಹಾಗೂ ಕೆಟ್ಟ ಭವಿಷ್ಯವನ್ನು ಉಂಟುಮಾಡುವುದು. ಅಂತಹ ಸಮಯದಲ್ಲಿ ಹೆಚ್ಚು ಆಯಾಸವಾದರೆ ಕಾಲುಗಳನ್ನು ಚಾಚಿಕೊಂಡು ಕುಳಿತುಕೊಳ್ಳಬೇಕು. ಹೊರತಾಗಿ ಮಲಗಬಾರದು ಎಂದು ಹೇಳಲಾಗುವುದು.
Solar Eclipse saakshatv astrology

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ತಲೆ ಸ್ನಾನ ಮಾಡಿ
ಸೂರ್ಯ ಗ್ರಹಣದ ಸಮಯದಲ್ಲಿ ಎಲ್ಲರೂ ಶುದ್ಧತೆಯನ್ನು ಕಾಪಾಡಿಕೊಳ್ಳಬೇಕು. ಗರ್ಭಿಣಿಯರು ಸಹ ಗ್ರಹಣದ ಪೂರ್ವದಲ್ಲಿ ಹಾಗೂ ಗ್ರಹಣ ಬಿಡುಗಡೆಯಾದ ನಂತರ ತಲೆ ಸ್ನಾನ ಮಾಡಬೇಕು. ಇದರಿಂದ ಯಾವುದೇ ದೋಷ ಹಾಗೂ ಸೋಂಕುಗಳು ಅಂಟಿಕೊಳ್ಳದು. ಜೊತೆಗೆ ಭವಿಷ್ಯದಲ್ಲಿ ಉತ್ತಮ ಅದೃಷ್ಟಗಳು ಸಂಭವಿಸುತ್ತವೆ.

ಮಂತ್ರಗಳನ್ನು ಪಠಿಸಿ
ಸೂರ್ಯ ಗ್ರಹಣದ ದುಷ್ಪರಿಣಾಮವು ಮಗು ಮತ್ತು ತಾಯಿಯ ಮೇಲೆ ಉಂಟಾಗದಂತೆ ಗ್ರಹಣದ ಸಮಯದಲ್ಲಿ ಜಪ, ದೇವರ ಮಂತ್ರ ಪಠಣೆ, ಗೋಪಾಲ ಮಂತ್ರ, ಮಹಾ ಮೃತ್ಯುಂಜಯ ಜಪ, ವಿಷ್ಣು ಮಂತ್ರ, ಸೂರ್ಯ ಮಂತ್ರಗಳನ್ನು ಪಠಿಸಬೇಕು. ಆಗ ಉತ್ತಮ ಸಂಗತಿಗಳು ಭವಿಷ್ಯದಲ್ಲಿ ಸಂಭವಿಸುತ್ತವೆ ಎಂದು ಹೇಳಲಾಗುವುದು.

ಗ್ರಹಣದ ಸಮಯದಲ್ಲಿ ಆಹಾರಗಳ ಸೇವನೆ ಮಾಡಬಾರದು
ಗ್ರಹಣದ ಸಮಯದಲ್ಲಿ ಎಲ್ಲವೂ ಕಲುಷಿತವಾಗಿರುತ್ತವೆ. ಹಾಗಾಗಿ ಅಂತಹ ಸಮಯದಲ್ಲಿ ಊಟ-ತಿಂಡಿಗಳನ್ನು ಮಾಡಬಾರದು. ಗರ್ಭಿಣಿಯರು ನೀರನ್ನು ಕುಡಿಯುವುದಾದರೆ ನೀರಿಗೆ ತುಳಸಿ ಎಲೆಯನ್ನು ಸೇರಿಸಿ ಕುಡಿಯಬೇಕು. ದ್ರವ ರೂಪದ ಲಘು ಆಹಾರವನ್ನು ಮಾತ್ರ ಸೇವಿಸಬೇಕು. ನೀರನ್ನು ಕುಡಿಯುವಾಗ ಕುದಿಸಿ ಕುಡಿಯುವುದು ಉತ್ತಮ.

ಸೂರ್ಯನ ಕಿರಣದಿಂದ ಬಂಧಿಸಿಕೊಳ್ಳಿ
ಸೂರ್ಯ ಗ್ರಹಣದ ಸಮಯದಲ್ಲಿ ಬೀಳುವ ಬೆಳಕು ಹಾಗೂ ಗಾಳಿಯ ಪ್ರಭಾವದಿಂದ ತಪ್ಪಿಸಿಕೊಳ್ಳಲು ಮನೆಯ ಕಿಟಕಿ ಹಾಗೂ ಬಾಗಿಲುಗಳಿಗೆ ಪರದೆಗಳನ್ನು ಮುಚ್ಚುವುದು ಸೂಕ್ತ. ಇದರಿಂದ ನೇರವಾದ ಬೆಳಕು ಗರ್ಭಿಣಿಯರ ಮೇಲೆ ಪ್ರಭಾವ ಬೀರದು. ಆದಷ್ಟು ಜಾಗರೂಕರಾಗಿರುವುದು ಒಳ್ಳೆಯದು.

Tags: #astrologyEclipse
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram