ತುಮಕೂರು: ವ್ಯಕ್ತಿಯೊಬ್ಬನ ಕೊಲೆ ಮಾಡಿ 30 ಮೇಕೆಗಳನ್ನು ಕದ್ದೊಯ್ದಿದ್ದ ಆರೋಪಿಯನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.
ಮಣಿಕಂಠ ಬಂಧಿತ ಆರೋಪಿ. ಪಾವಗಡ (Pavagada) ತಾಲೂಕಿನ ದೇವಲಕೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಆರೋಪಿಯು ನರಸಿಂಹಪ್ಪ (60) ಎಂಬುವವರನ್ನು ಕೊಲೆ ಮಾಡಿ, 30 ಮೇಕೆಗಳನ್ನು ಕದ್ದು ಪರಾರಿಯಾಗಿದ್ದ.
ಅಲ್ಲದೇ, ತಾನು ಕದ್ದಿದ್ದ ಮೇಕೆಗಳನ್ನು ಚಿತ್ರದುರ್ಗದ ಹಿರಿಯೂರಿನ ಕುರಿಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸಿದ್ದ. ಪೊಲೀಸರು ಆರೋಪಿಯನ್ನು ಸಂತೆಯಲ್ಲಿ ಕುರಿ ಸಮೇತ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯಿಂದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.








