ಯುವ ನಟ ಸತೀಶ್ ವಜ್ರ ಬೀಕರ ಹತ್ಯೆ – ಬಾಮೈದನಿಂದಲೇ ಕೊಲೆ ಶಂಕೆ…
ಸ್ಯಾಂಡಲ್ವುಡ್ ಯುವ ನಟ ಸತೀಶ್ ವಜ್ರ ಎಂಬುವರನ್ನ ಶುಕ್ರವಾರ ರಾತ್ರಿ ಭೀಕರ ಹತ್ಯೆ ಮಾಡಲಾಗಿದೆ.
ಬೆಂಗಳೂರು ನಗರದ ಆರ್ಆರ್ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣಗೆರೆ ಎಂಬಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ನಟನ ಬಾಮೈದನೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ‘ಲಗೋರಿ’ ಎಂಬ ಕಿರು ಚಿತ್ರದ ಮೂಲಕ ಸತೀಶ್ ಜನರ ಗಮನ ಸೆಳೆದಿದ್ದರು.
ಮೂಲತಃ ಮದ್ದೂರು ಮೂಲದ ಯುವ ನಟ ಸಾಮಾಜಿಕ ಜಾಲತಾಣಗಳಲ್ಲಿಯೂ ಸಾಕಷ್ಟು ಚಿರಪರಿಚಿತರಾಗಿದ್ದರು. ಕೆಲ ತಿಂಗಳ ಹಿಂದಷ್ಟೇ ಓರ್ವ ಯುವತಿಯನ್ನು ಪ್ರೀತಿಸಿ ಸತೀಶ್ ಮದುವೆಯಾಗಿದ್ದರು, 3 ತಿಂಗಳ ಹಿಂದಷ್ಟೆ ಸತೀಶ್ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಅಕ್ಕನ ಸಾವಿಗೆ ಸತೀಶನೇ ಕಾರಣ ಎಂದು ನಿರ್ಧರಿಸಿ ಬಾಮೈದನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಶವವನ್ನು ಮರಣೋತ್ತರ ಪರಿಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಆರ್ಆರ್ನಗರ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.