ಫ್ಯಾಟ್ ಸರ್ಜರಿ ವೇಳೆ ಕನ್ನಡದ ಖ್ಯಾತ ಕಿರುತೆರೆ ನಟಿ ನಿಧನ…..
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾದ ಪರಿಣಾಮ ಕನ್ನಡದ ಕಿರುತೆರೆ ನಟಿ ಚೇತನಾ ರಾಜ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ಚೇತನಾ ರಾಜ್ ನಟಿಸುತ್ತಿದ್ದರು. ಸೋಮವಾರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ನವರಂಗ ಸರ್ಕಲ್ನ ಡಾ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಫ್ಯಾಟ್ ಸರ್ಜರಿಗೆಂದು ಚೇತನಾ ತೆರಳಿದ್ದರು.
ಆದರೆ ಈ ವಿಚಾರ ಪೋಷಕರಿಗೆ ತಿಳಿದಿರಲಿಲ್ಲ, ಬಳಿಕ ವಿಷಯ ತಿಳಿದುಕೊಂಡ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಇನ್ನು ಸರ್ಜರಿ ನಡೆಸುತ್ತಿರುವಾಗ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದು, ಗಂಭೀರ ಪರಿಸ್ಥಿತಿಯಲ್ಲಿರುವ ಅವರನ್ನು ತಕ್ಷಣವೇ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು.
ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ಕುಟುಂಬದವರ ಜೊತೆ ವಾಸವಿದ್ದರು. ನಟಿಯ ಸಾವಿನಿಂದ ಕಂಗಾಲಾದ ಪೋಷಕರು, ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ವೈದ್ಯರು ಸರ್ಜರಿಗೆ ಮುಂದಾಗಿದ್ದಾರೆ’ ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಮಗಳು ಸಾವಿಗೀಡಾಗಿದ್ದಾಳೆ ಎಂದು ಆರೋಪ ಮಾಡಿದ್ದಾರೆ.