ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ ಗೆ (Darshan) ರಾಜಾತಿಥ್ಯ ಸಿಗುತ್ತಿದೆ ಎಂಬ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಭಾರೀ ಚರ್ಚೆ ಶುರುವಾಗಿದೆ. ಈ ಮಧ್ಯೆ ಮಾಜಿ ಸಂಸದೆ ಹಾಗೂ ನಟಿ ನಟಿ ಸುಮಲತಾ (Sumalatha) ಈ ಕುರಿತು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಆರೋಪಿ ಸ್ಥಾನದಲ್ಲಿದ್ದಾರೆ. ಉಳಿದವರನ್ನು ಬಿಟ್ಟು ಅವರನ್ನೇ ಹೈಲೆಟ್ ಮಾಡುತ್ತಿದ್ದಾರೆ. ಆದರೆ, ಜೈಲಿನಲ್ಲಿ ಇರೋರು, ರೌಡಿಗಳು. ಅಲ್ಲಿ ಇರುವುದೆಲ್ಲ ಕ್ರಿಮಿನಲ್ಸ್ ಅಲ್ವಾ? ಹೀಗಾಗಿ ದರ್ಶನ್ ಜೈಲಿನಲ್ಲಿ ಅವರೊಂದಿಗೆ ಇರಲೇಬೇಕು. ಈ ಹಿನ್ನೆಲೆಯಲ್ಲಿ ಎಲ್ಲರೂ ವಿವೇಚನೆಯಿಂದ ಮಾತನಾಡಬೇಕು ಎಂದು ಹೇಲಿದ್ದಾರೆ.
ಅಲ್ಲಿ ಓಡಾಟ ನಡೆಸೋಕೆ ಯಾರು ಸಿಗುತ್ತಾರೆ. ಯಾವುದಾದರೂ ಒಂದು ತಪ್ಪು ಮಾಡಿದವರೇ ಇಲ್ಲಿ ಇರಬೇಕು ಅಲ್ವಾ? ತಪ್ಪು ಮಾಡಿದವರೇ ಅಲ್ವಾ ಜೈಲಿಗೆ ಹೋಗೋದು ಎಂದು ದರ್ಶನ್ರನ್ನು ಸಮರ್ಥಿಸಿಕೊಂಡು ಸುಮಲತಾ ಹೇಳಿದ್ದಾರೆ.
ರಾಜಾತಿಥ್ಯ ವಿಷಯದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಈಗಾಗಲೇ ಈ ಕುರಿತು ತನಿಖೆ ಕೂಡ ನಡೆಯುತ್ತಿದೆ. ದರ್ಶನ್ ಈಗ ಆರೋಪಿ ಸ್ಥಾನದಲ್ಲಿದ್ದಾರೆ. ಜೈಲಿನಲ್ಲಿ ಉಳಿದವರನ್ನ ಬಿಟ್ಟು ದರ್ಶನ್ರನ್ನೇ ಹೈಲೆಟ್ ಮಾಡುತ್ತಿದ್ದಾರೆ ಎಂದು ನಟಿ ಬೇಸರ ವ್ಯಕ್ತಪಡಿಸಿದ್ದಾರೆ.