ಪತ್ರಿಕೆಗಳಿಗೆ ಕಳೆದ ಒಂದು ವರ್ಷದಿಂದ ಬಾಕಿ ಇರುವ ಜಾಹಿರಾತು ಹಣವನ್ನು ಬಿಡುಗಡೆ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ನಿನ್ನೆ ಕಾಂಗ್ರೆಸ್ ನಾಯಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಜಾಹಿರಾತು ಹಣ ಬಾಕಿ ಇರುವ ಬಗ್ಗೆ ಗಮನ ಸೆಳೆದರು. ಈ ಕುರಿತು ಬರೆದಿರುವ ಪತ್ರವನ್ನೂ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಅವರು ಸಲ್ಲಿಸಿದರು. ಲಾಕ್ ಡೌನ್ ನಿಂದಾಗಿ ಮಾದ್ಯಮ ಕ್ಷೇತ್ರ ಸಹ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ. ಜಾಹಿರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಜೊತೆಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹಿರಾತು ನೀಡುವಂತೆ ಒತ್ತಾಯಿಸಿದರು.
ಸ್ಯಾಂಡಲ್ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್ಷಾ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...








