ಪತ್ರಿಕೆಗಳಿಗೆ ಕಳೆದ ಒಂದು ವರ್ಷದಿಂದ ಬಾಕಿ ಇರುವ ಜಾಹಿರಾತು ಹಣವನ್ನು ಬಿಡುಗಡೆ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ನಿನ್ನೆ ಕಾಂಗ್ರೆಸ್ ನಾಯಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಜಾಹಿರಾತು ಹಣ ಬಾಕಿ ಇರುವ ಬಗ್ಗೆ ಗಮನ ಸೆಳೆದರು. ಈ ಕುರಿತು ಬರೆದಿರುವ ಪತ್ರವನ್ನೂ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಅವರು ಸಲ್ಲಿಸಿದರು. ಲಾಕ್ ಡೌನ್ ನಿಂದಾಗಿ ಮಾದ್ಯಮ ಕ್ಷೇತ್ರ ಸಹ ತೊಂದರೆಗೆ ಸಿಲುಕಿದೆ. ಅದರಲ್ಲೂ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಸಂಕಷ್ಟದಲ್ಲಿವೆ. ಜಾಹಿರಾತು ಹಣ ಬಿಡುಗಡೆ ಮಾಡಿದರೆ ಅನುಕೂಲವಾಗುತ್ತದೆ. ಜೊತೆಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಜಾಹಿರಾತು ನೀಡುವಂತೆ ಒತ್ತಾಯಿಸಿದರು.
ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ
ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...








