ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

11 ವರ್ಷಗಳ ನಂತರ ಭಾರತೀಯರ ಕನಸು ನನಸು

ಭರ್ಜರಿ ಗೆಲುವಿನ ನಗೆ ಬೀರಿದ ಭಾರತ

Author2 by Author2
June 30, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

11 ವರ್ಷಗಳ ನಂತರ 140 ಕೋಟಿ ಭಾರತೀಯರ ಕನಸು ನನಸಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ ಗಳಿಂದ ಸೋಲಿಸಿದ ಭಾರತ ತಂಡವು ದಾಖಲೆಯ 2ನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿತ್ತು. ಆನಂತರ 2016 ರಲ್ಲಿ ಮತ್ತೊಮ್ಮೆ ಫೈನಲ್ ತಲುಪಿತ್ತು. ಆದರೆ, ಅಲ್ಲಿ ಶ್ರೀಲಂಕಾ ವಿರುದ್ಧ ಮುಗ್ಗರಿಸಿತ್ತು. ಆದರೆ, ಈ ಬಾರಿ ಗೆಲುವಿನ ನಗೆ ಬೀರಿತು. ಅಷ್ಟೇ ಅಲ್ಲ ಭಾರತೀಯ ತಂಡದ ಕೋಚ್ ರಾಹುಲ್ ದ್ರಾವಿಡ್ ಗೆ ಗೆಲುವಿನ ವಿದಾಯ ಹೇಳಿತು.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಬ್ರಿಡ್ಜ್‌ಟೌನ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಟಾಸ್ ಗೆದ್ದ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. 7 ಇನ್ನಿಂಗ್ಸ್‌ಗಳಲ್ಲಿ ವಿಫಲರಾಗಿದ್ದ ಕೊಹ್ಲಿ ಮೊದಲ ಓವರ್‌ನಲ್ಲಿಯೇ 3 ಬೌಂಡರಿ ಬಾರಿಸುವ ಮೂಲಕ ವೇಗದ ಆರಂಭ ನೀಡಿದರು. ಆದರೆ, ಕೇಶವ್ ಮಹಾರಾಜ್ ಅವರು ಮೊದಲು ರೋಹಿತ್ ಮತ್ತು ನಂತರ ರಿಷಬ್ ಪಂತ್ ಅವರ ವಿಕೆಟ್ ಕಬಳಿಸುವ ಮೂಲಕ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ನೀಡಿದರು. ಕಗಿಸೊ ರಬಾಡ ಐದನೇ ಓವರ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ದೊಡ್ಡ ಆಘಾತ ನೀಡಿದರು. ಹೀಗಾಗಿ ಟೀಂ ಇಂಡಿಯಾ ಕೇವಲ 34 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು.

ಬ್ಯಾಟಿಂಗ್ ನಲ್ಲಿ ಬಡ್ತಿ ಪಡೆದು ಬಂದ ಅಕ್ಷರ್ ಪಟೇಲ್ ವೇಗದ ಆರಂಭದ ನಂತರ ಕೊಹ್ಲಿ ಒಂದು ತುದಿಯಿಂದ ಮುನ್ನಡೆ ಕಾಯ್ದುಕೊಂಡರೆ, ಅಕ್ಷರ್ ಪಟೇಲ್ ನಡುನಡುವೆ ಬೌಂಡರಿ ಬಾರಿಸಿ ತಂಡದ ಸ್ಕೋರ್ ಹೆಚ್ಚಿಸುತ್ತ ಸಾಗಿದರು. ನಾಲ್ಕನೇ ವಿಕೆಟ್‌ಗೆ 72 ರನ್‌ಗಳ ಜೊತೆಯಾಟ ನೀಡಿದರು. ಅಕ್ಷರ್ ಪಟೇಲ್ 31 ಎಸತೆಗಳಲ್ಲಿ 47 ಗಳಿಸಿ ರನೌಟ್ ಆದರು. ನಂತರ ಕೊಹ್ಲಿ ಮತ್ತು ಶಿವಂ ದುಬೆ ಕೂಡ 57 ರನ್ ಜೊತೆಯಾಟ ನೀಡಿದರು. ಈ ಸಮಯದಲ್ಲಿ, ಕೊಹ್ಲಿ ನಿಧಾನಗತಿಯ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆದರೆ ಕೊನೆಯ ಓವರ್‌ಗಳಲ್ಲಿ ಹೊಡಿಬಡಿ ಆಟಕ್ಕೆ ಮುಂದಾದ ಕೊಹ್ಲಿ, ತಂಡ 176 ರನ್‌ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ ಕೊಹ್ಲಿ 59 ಎಸೆತಗಳಲ್ಲಿ 6 ಬೌಂಟರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು.

ಸ್ಪರ್ಧಾತ್ಮಕ ಮೊತ್ತದ ಗೆಲುವಿನ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಎರಡನೇ ಓವರ್‌ನಲ್ಲಿಯೇ ಜಸ್ಪ್ರೀತ್ ಬುಮ್ರಾ ಅಚ್ಚರಿಯ ಔಟ್‌ಸ್ವಿಂಗ್‌ನಲ್ಲಿ ರೀಜಾ ಹೆಂಡ್ರಿಕ್ಸ್ ರನ್ನು ಬಲಿ ಪಡೆದರು. ನಾಯಕ ಏಡನ್ ಮಾರ್ಕ್ರಾಮ್ ಕೂಡ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗದೆ ಅರ್ಷದೀಪ್ ಸಿಂಗ್ ಬೌಲಿಂಗ್ ನಲ್ಲಿ ಪೆವಿಲಿಯನ್‌ ಸೇರಿಕೊಂಡರು. ಆಗ ಕ್ವಿಂಟನ್ ಡಿ ಕಾಕ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಂಡದ ಇನ್ನಿಂಗ್ಸ್ ಕೈಗೆತ್ತಿಕೊಂಡು ಪ್ರತಿದಾಳಿ ನಡೆಸಿ ತಂಡವನ್ನು 9 ನೇ ಓವರ್‌ ಅಂತ್ಯಕ್ಕೆ 70 ರನ್‌ಗಳ ಗಡಿ ದಾಟಿಸಿದರು. ಆದರೆ ಅಕ್ಷರ್ ಪಟೇಲ್, ಸ್ಟಬ್ಸ್ ಅವರ ಸ್ಫೋಟಕ ಇನ್ನಿಂಗ್ಸ್ ನ್ನು ಅಂತ್ಯಗೊಳಿಸಿದರು. ನಂತರ ಕ್ಲಾಸನ್ ಮತ್ತು ಡಿ ಕಾಕ್ ಜೊತೆಯಾಟ ನಡೆಸಿ ತಂಡವನ್ನು 100 ರನ್‌ಗಳ ಗಡಿ ದಾಟಿಸಿದರು. ಈ ಜೊತೆಯಾಟವು ಅಪಾಯಕಾರಿಯಾಗುವಂತೆ ತೋರುತ್ತಿತ್ತು. ಅರ್ಷದೀಪ್, ಡಿ ಕಾಕ್ ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾಕ್ಕೆ 4ನೇ ವಿಕೆಟ್ ತಂದು ಕೊಟ್ಟರು. ಆಗ ಸ್ಫೋಟಕ ಆಟಗಾರ ಹೆನ್ರಿಚ್ ಕ್ಲಾಸೆನ್, ಟೀಂ ಇಂಡಿಯಾ ಪರ ವಾಲಿದ್ದ ತಂಡವನ್ನು ತಮ್ಮತ್ತ ತಿರುಗಿಸಿಕೊಂಡರು. ಅವರು ಕುಲ್ದೀಪ್ ಯಾದವ್ ಅವರ ಓವರ್‌ನಲ್ಲಿ 14 ರನ್ ಗಳಿಸಿದರು. ನಂತರದ ಅಕ್ಷರ್ ಪಟೇಲ್ ಮೇಲೆ 2 ಸಿಕ್ಸರ್ ಮತ್ತು 2 ಬೌಂಡರಿಗಳನ್ನು ಹೊಡೆಯುವ ಮೂಲಕ 24 ರನ್ ಗಳಿಸಿದರು.

ಹೀಗಾಗಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಹಾರ್ದಿಕ್ 17ನೇ ಓವರ್ ಇಡೀ ಪಂದ್ಯದ ದಿಕ್ಕನೇ ಬದಲಿಸಿತು. ಈ ಹಂತದಲ್ಲಿ ಆಫ್ರಿಕಾ ಗೆಲುವಿಗೆ 24 ಎಸೆತಗಳಲ್ಲಿ 26 ರನ್‌ಗಳ ಅಗತ್ಯವಿತ್ತು. ಈ ವೇಳೆ ಹಾರ್ದಿಕ್ 17ನೇ ಓವರ್‌ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದರು. ಆ ಓವರ್ ನಲ್ಲಿ 4 ರನ್ ನೀಡಿದರು.ನಂತರದ ಓವರ್ ನಲ್ಲಿ ಬುಮ್ರಾ ಕೇವಲ 2 ರನ್ ನೀಡಿ ಮಾರ್ಕೊ ಯಾನ್ಸನ್ರನ್ನು ಬೌಲ್ಡ್ ಮಾಡಿದರು. ಕೊನೆಯ 2 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್‌ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ಹೀಗಾಗಿ ಕೊನೆಯ ಓವರ್‌ ನಲ್ಲಿ 16 ರನ್‌ ಗಳ ಅಗತ್ಯವಿತ್ತು. ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನ ನಗೆ ಬೀರುವಂತೆ ಮಾಡಿದರು. ಈ ಓವರ್ ನಲ್ಲಿ ಕೇವಲ 8 ರನ್ ನೀಡಿ, ಭಾರತ ಗೆಲುವಿನ ನಗೆ ಬೀರಿತು.

Tags: After 11 years the Indian dream came true
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram