ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಾಲ್ಮೀಕಿ ಸಮುದಾಯದ ಬೆನ್ನಲ್ಲೇ ಮೀಸಲಾತಿಗಾಗಿ ಲಿಂಗಾಯತರ ಹಕ್ಕೊತ್ತಾಯ: ಸಿಎಂಗೆ ಹೊರಟ್ಟಿ ಪತ್ರ

Kariyappa N by Kariyappa N
November 15, 2020
in Newsbeat, Politics, Samagra karnataka, ರಾಜ್ಯ
bjp devlpment
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹಕ್ಕೋತ್ತಾಯ ರಾಜ್ಯ ಸರ್ಕಾರಕ್ಕೆ ಮತ್ತೆ ತಲೆ ನೋವಾಗುವ ಸಾಧ್ಯತೆ ಇದೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಉಗ್ರ ಹೋರಾಟ ಆರಂಭವಾದ ಬೆನ್ನಲ್ಲೇ, ಲಿಂಗಾಯತ ಸಮುದಾಯಕ್ಕೆ ಶೇಕಡಾ 16ರಷ್ಟು ಮೀಸಲಾತಿಗೆ ಆಗ್ರಹಿಸಿ ಎಂಎಲ್‍ಸಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.


ಕಳೆದ ಕೆಲ ತಿಂಗಳಿಂದ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ರಾಜನಹಳ್ಳಿ ಸಂಸ್ಥಾನದ ಪ್ರಸನ್ನಾನಂದಪುರಿ ಸ್ವಾಮೀಜಿ ಹೋರಾಟ ಆರಂಭಿಸಿದ್ದರು ಆದರೆ, ರಾಜನಹಳ್ಳಿ ಗುರುಪೀಠದಿಂದ ರಾಜಧಾನಿ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿ ಸತ್ಯಾಗ್ರಹ ಆರಂಭಿಸಿ, ಸರ್ಕಾರಕ್ಕೆ ಗಡುವು ನೀಡಿ ಹೋರಾಟ ತಾತ್ಕಾಲಿಕ ಅಂತ್ಯಗೊಳಿಸಿದ್ದರು. ಇಂದು ಸಂಜೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಬಸವರಾಜ ಹೊರಟ್ಟಿ ಲಿಂಗಾಯತರಿಗೆ ಮೀಸಲಾತಿಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿರುವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಒದಗಿಸಬೇಕು. ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯದವರಿಗೆ ಶೇ.16ರಷ್ಟು ಮೀಸಲಾತಿ ಕೊಟ್ಟಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿ ಲಿಂಗಾಯತರಿಗೆ ಶೇ.16 ರಷ್ಟು ಮೀಸಲಾತಿ ಕೊಡಬೇಕು. ಈ ಬಗ್ಗೆ ಹಲವು ಬಾರಿ ಲಿಂಗಾಯತ ಸಮುದಾಯದ ಮುಖಂಡರು ತಮಗೆ ಮನವಿ ಕೊಟ್ಟಿದ್ದಾರೆ. ನೀವು ಲಿಂಗಾಯತ ಸಮಾಜದಲ್ಲಿ ಹುಟ್ಟಿದ್ದರಿಂದ ನಿಮಗೆ ಮುಖ್ಯಮಂತ್ರಿ ಪದವಿ ಸಿಕ್ಕಿದೆ ಎಂಬುದನ್ನು ಮರೆಯಬಾರದು. ಹಿತ್ತಲ ಗಿಡ ಮದ್ದಲ್ಲ ಎಂಬಂತೆ ನೀವು ಲಿಂಗಾಯತರನ್ನು ನಿಷ್ಕಾಳಜಿ ಮಾಡುತ್ತೀರಿ ಎಂಬ ಮಾತಿದೆ. ಆ ಮಾತನ್ನು ಹೋಗಲಾಡಿಸಲು ಲಿಂಗಾಯರಿಗೆ ಶೇಕಡಾ 16ರಷ್ಟು ಮೀಸಲಾತಿ ಘೋಷಣೆ ಮಾಡಬೇಕು ಎಂದು ಲಿಂಗಾಯತ ಸಮುದಾಯದ ನಾಯಕರೂ ಆದ ವಿಧಾನಪರಿಷತ್ ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

Related posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026
66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

June 17, 2026

ಬಸವರಾಜ ಹೊರಟ್ಟಿ ಪತ್ರದಲ್ಲೇನಿದೆ..
ಕರ್ನಾಟಕದಲ್ಲಿರುವ ಹಿಂದೂ ಮರಾಠ ಸಮಾಜಕ್ಕೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು, ಸಮಸ್ತ ಲಿಂಗಾಯತರ ವೇದಿಕೆ ಸ್ವಾಗತಿಸುತ್ತದೆ. ಇದು ಬಹಳ ದಿನಗಳ ಬೇಡಿಕೆಯಾಗಿತ್ತು ಎಂದಿರುವ ಹೊರಟ್ಟಿ, ಕರ್ನಾಟಕದಲ್ಲಿ ಅನೇಕ ದಿನಗಳಿಂದ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ಕೊಡಬೇಕೆಂದು ಹತ್ತು ಹಲವು ಬಾರಿ ಮನವಿಗಳನ್ನು ಸಲ್ಲಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮರಾಠ ಸಮಾಜಕ್ಕೆ ಶೇ.16ರಷ್ಟು ಮೀಸಲಾತಿಯನ್ನು ನೀಡಿ ಆ ಸಮಾಜ ಎಲ್ಲ ಅನುಕೂಲತೆಯನ್ನು ಪಡೆಯುತ್ತಿದೆ. ಆದರೆ, ಅಲ್ಲಿ ಮರಾಠ ಸಮುದಾಯ ದೊಡ್ಡ ಸಂಖ್ಯೆಯಲ್ಲಿರುವಂತೆ ಕರ್ನಾಟಕದಲ್ಲಿಯೂ ಲಿಂಗಾಯತರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಶೇ.16ರಷ್ಟು ಮೀಸಲಾತಿಯನ್ನು ಕೊಡುವುದು ಯೋಗ್ಯವಲ್ಲವೇ ? ಇಡೀ ಕರ್ನಾಟಕದ ಸಮಸ್ತ ಲಿಂಗಾಯತರ ಹೋರಾಟ ವೇದಿಕೆ ತಮ್ಮನ್ನು ಭೇಟಿಯಾಗಿ ಶೇ.16ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಕೇಳಿಕೊಂಡರೂ ಇಲ್ಲಿಯವರೆಗೆ ಯಾವ ಕ್ರಮ ತೆಗೆದುಕೊಂಡಿಲ್ಲ.

ಹಿಂದೆ ನಡೆದ ಹಲವು ಚುನಾವಣಾ ಪ್ರಚಾರಗಳಲ್ಲಿ ಲಿಂಗಾಯತರ ಒಂದು ಮತವೂ ಬೇರೆ ಪಕ್ಷದ ಅಭ್ಯರ್ಥಿಗೆ ಹೋಗಬಾರದು ಎಂದು ಹೇಳಿರುವ ನೀವು ಲಿಂಗಾಯತರಿಗೆ ಮಾಡಿದ್ದೇನು. ತಾವು ಲಿಂಗಾಯತ ಸಮಾಜದಲ್ಲಿ ಹುಟ್ಟಿದ್ದರಿಂದ ಮುಖ್ಯಮಂತ್ರಿ ಪದವಿ ಸಿಕ್ಕಿದೆ ಎಂಬುದನ್ನು ಸಹ ನೀವು ನೆನಪಿನಲ್ಲಿಟ್ಟುಕೊಳ್ಳಬೇಕು. `ಹಿತ್ತಲ ಗಿಡ’ ಮದ್ದಲ್ಲ ಎಂದು ಹೇಳುವ ಗಾದೆ ಮಾತಿನಂತೆ ನೀವು ಲಿಂಗಾಯತರನ್ನು ನಿಷ್ಕಾಳಜಿ ಮಾಡುತ್ತಾರೆಂಬುದು ಅನೇಕರ ಅಹವಾಲು. ಈ ದಿಸೆಯಲ್ಲಿ ನೀವು ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿಯನ್ನು ಎಂಬುದು ಸಮಸ್ತ ಲಿಂಗಾಯತರ ಬೇಡಿಕೆಯಾಗಿದೆ. ನೀವು ಲಿಂಗಾಯತರಾದ ಮೇಲೆ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ದೊರೆಯುತ್ತದೆಂದು ಸಮುದಾಯದ ಜನರು ನಿರೀಕ್ಷೆಯಲ್ಲಿದ್ದರು. ಈಗ ಅವರೆಲ್ಲರಿಗೂ ನಿರಾಸೆಯಾಗಿದೆ. ಬೇರೆ ಬೇರೆ ಸಮುದಾಯದವರು ತಮಗೆ ಹೆಚ್ಚು ಹೆಚ್ಚು ಮೀಸಲಾತಿಯನ್ನು ಕೊಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಗಳು ನ್ಯಾಯಯುತವಾಗಿರುವುದರಿಂದ ಅದಕ್ಕೆ ಅವರು ಒತ್ತಾಯ ಮಾಡುತ್ತಿದ್ದಾರೆ ಜಾತ್ಯತೀತ ರಾಷ್ಟ್ರವಾದರೂ ಜಾತ್ಯತೀತ ಮನೋಭಾವನೆ ಹೊಂದಿದ ಕರ್ನಾಟಕದಲ್ಲಿಯೂ ಎಲ್ಲವೂ ಜಾತಿಯ ಆಧಾರದಲ್ಲಿಯೇ ನಡೆಯುತ್ತಿದೆ. ತಮಿಳುನಾಡು ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕಲ್ಪಿಸಿದ್ದಾರೆ. ಲಿಂಗಾಯತರಲ್ಲಿಯೂ ಶೇ.100ರಲ್ಲಿ 70ರಷ್ಟು ಬಡವರು, ಕೂಲಿಕಾರರು ಇದ್ದಾರೆ. ಲಿಂಗಾಯತ ಸಮಾಜದವರು ಕೃಷಿಯನ್ನು ಅವಲಂಬಿಸಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದಾರೆ. ಪ್ರಕೃತಿ ವಿಕೋಪದಿಂದ ಇವರ ಜೀವನ ಏರುಪೇರಾಗಿ ಸದಾ ಕಷ್ಟವನ್ನೇ ಅನುಭವಿಸುತ್ತಿರುವ ಈ ಸಮಾಜಕ್ಕೆ ಮೀಸಲಾತಿ ಕೊಡುವುದು ನ್ಯಾಯ ಸಮ್ಮತವಾಗಿದೆ. ಎಲ್ಲರೂ ಅಧಿಕಾರವಿದ್ದಾಗ ತಮ್ಮ ತಮ್ಮ ಸಮುದಾಯ, ಸಮಾಜದ ಬಗ್ಗೆ ಕಾಳಜಿಯನ್ನು ವಹಿಸುತ್ತಾರೆ. ಅದರಂತೆ ನೀವೇಕೆ ಕಾಳಜಿ ವಹಿಸಬಾರದು ?
ಮೇಲಿನ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿಯನ್ನು ನೀಡಬೇಕು. ನೀವು ಈಗ ಇಚ್ಛಾಶಕ್ತಿಯನ್ನು ಪ್ರದರ್ಶನ ಮಾಡಿ ಬೇಡಿಕೆ ಈಡೇರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಬಸವರಾಜ ಹೊರಟ್ಟಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Basavaraj horattiletterlingayath reservationmaratavalmiki resrvationyadiyurappa
ShareTweetSendShare
Join us on:

Related Posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram