ಅಘನಾಶಿನಿ ನದಿ ಉಳಿವಿಗಾಗಿ ಒಟ್ಟಾಗಿ ಹೋರಾಡಬೇಕಿದೆ : ಹೆಚ್ ಡಿಕೆ
ಬೆಂಗಳೂರು : ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ. ಆ ನದಿ ಉಳಿಸಿಕೊಳ್ಳುವ ಬಗ್ಗೆ ಒಟ್ಟಾಗಿ ಹೋರಾಡಬೇಕಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಉತ್ತರ ಕನ್ನಡದ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ. ಆ ನದಿ ಉಳಿಸಿಕೊಳ್ಳುವ ಬಗ್ಗೆ ಒಟ್ಟಾಗಿ ಹೋರಾಡಬೇಕಿದೆ. ಈ ಪ್ರಯತ್ನಕ್ಕೆ ನನ್ನ & ಜೆಡಿಎಸ್ ಪಕ್ಷದ ಬೆಂಬಲ ಇದೆ. ನದಿಗಳನ್ನು ಉಳಿಸಿಕೊಳ್ಳುವುದರ ಜತೆಗೆ, ಆ ನದಿಗಳ ನೀರನ್ನು ಬದುಕಿಗೆ ಬಳಸಿಕೊಳ್ಳುವ ಶುಭಸಂಕಲ್ಪದೊಂದಿಗೆ ನಾವು ʼಜನತಾ ಜಲಧಾರೆʼ ಕಾರ್ಯಕ್ರಮ ರೂಪಿಸಿದ್ದೇವೆ.
ಸ್ಥಳೀಯರ ಜೀವನಾಧಾರವಾಗಿದ್ದ ಚಿಪ್ಪಿಕಲ್ಲಿನ ಅಂಕೆ ಇಲ್ಲದ ಗಣಿಗಾರಿಕೆ ಅಘನಾಶಿನಿಯ ಅಸ್ತಿತ್ವಕ್ಕೇ ಧಕ್ಕೆ ತಂದಿದೆ. ಇಂಥ ನದಿಯನ್ನು ಕಳೆದುಕೊಂಡರೆ ಅದೊಂದು ʼರಾಷ್ಟ್ರೀಯ ದುರಂತʼವೇ ಹೌದು. ಸರಕಾರ ಕೂಡಲೇ ಅಘನಾಶಿನಿ ರಕ್ಷಣೆಗೆ ಅತ್ಯುನ್ನತ ಕಾರ್ಯಪಡೆ ರಚಿಸಿ ನದಿ ಉಳಿವಿಗೆ ವಿಜ್ಞಾನಿಗಳು ನೀಡಿರುವ ವರದಿಗಳನ್ನು ಪರಿಗಣಿಸಿ ಕ್ರಮ ವಹಿಸಬೇಕು. 3/4 pic.twitter.com/Qyh9gOVaqw
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 11, 2022
ಸ್ಥಳೀಯರ ಜೀವನಾಧಾರವಾಗಿದ್ದ ಚಿಪ್ಪಿಕಲ್ಲಿನ ಅಂಕೆ ಇಲ್ಲದ ಗಣಿಗಾರಿಕೆ ಅಘನಾಶಿನಿಯ ಅಸ್ತಿತ್ವಕ್ಕೇ ಧಕ್ಕೆ ತಂದಿದೆ. ಇಂಥ ನದಿಯನ್ನು ಕಳೆದುಕೊಂಡರೆ ಅದೊಂದು ʼರಾಷ್ಟ್ರೀಯ ದುರಂತʼವೇ ಹೌದು. ಸರಕಾರ ಕೂಡಲೇ ಅಘನಾಶಿನಿ ರಕ್ಷಣೆಗೆ ಅತ್ಯುನ್ನತ ಕಾರ್ಯಪಡೆ ರಚಿಸಿ ನದಿ ಉಳಿವಿಗೆ ವಿಜ್ಞಾನಿಗಳು ನೀಡಿರುವ ವರದಿಗಳನ್ನು ಪರಿಗಣಿಸಿ ಕ್ರಮ ವಹಿಸಬೇಕು.
ರಾಜ್ಯದಲ್ಲಿ ಅತಿ ವಿಶಾಲ ಅಳಿವೆಯುಳ್ಳ, ಅತ್ಯಂತ ಶುದ್ಧ ನದಿಯಾದ ಅಘನಾಶಿನಿಯನ್ನು ಉಳಿಸಲೇಬೇಕು. ಇಲ್ಲಿ ನಡೆಯುತ್ತಿರುವ ಚಿಪ್ಪಿಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ನಿಲ್ಲಿಸಬೇಕು ಎಂಬುದು ಸರಕಾರಕ್ಕೆ ನನ್ನ ಆಗ್ರಹ. ಈ ಹೋರಾಟದಲ್ಲಿ ನಾನೂ ಅಘನಾಶಿನಿಯ ದನಿಯಾಗುತ್ತೇನೆ ಎಂದು ತಿಳಿಸಿದ್ದಾರೆ.