ಇತ್ತೀಚೆಗೆ ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆ ಘೋಷಿಸಿದ ನಂತರ ಬಿಹಾರದಲ್ಲಿ ಪ್ರತಿಭಟನೆಯ ಕಿಚ್ಚು ಹೊತ್ತಿದೆ.. ಈ ಯೋಜನೆಯ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆ ಭುಗಿಲೆದ್ದಿದ್ದು ಟ್ರೈನ್ ಗೆ ಬೆಂಕಿ ಹಚ್ಚಿದಂತಹ ಪ್ರಸಂಗವೂ ನಡೆದಿದೆ.. ಇದೀಗ ಮುಂಜಾಗ್ರತಾ ಕ್ರಮವಾಗಿ ಪೂರ್ವ ಮಧ್ಯ ರೈಲ್ವೇಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ದೇಶದಲ್ಲಿರುವ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ನಿನ್ನೆಯಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ವಾಹನ ಸಂಚಾರಕ್ಕೆ ಸೇನಾ ಆಕಾಂಕ್ಷಿಗಳು ಅಡ್ಡಿಪಡಿಸಿದ್ದಾರೆ.
ಭಭುವಾ ರೋಡ್ ರೈಲ್ವೇ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಗಾಜಿನ ಕಿಟಕಿಗಳನ್ನು ಲಾಠಿಗಳಿಂದ ಒಡೆದು ಹಾಕಿದ್ದು, ರೈಲಿನ ಒಂದು ಕೋಚ್ಗೆ ಬೆಂಕಿ ಹಚ್ಚಿದ್ದಾರೆ.
ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಜೊತೆಗೆ 5 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ.
ಅಗ್ನಿಪಥ್ ನೇಮಕಾತಿ ವಿರೋಧಿಸಿ ಬಿಹಾರ, ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
https://twitter.com/i/status/1537336410768048128
https://twitter.com/i/status/1537369260443332608








