ಬೆಂಗಳೂರು: ರಾಜ್ಯ ಸಚಿವ ಸಂಪುಟ ಬೆಂಗಳೂರು (Bengaluru) ವಿಭಜಿಸುವ ಮಸೂದೆಗೆ ಒಪ್ಪಿಗೆ ಸಿಕ್ಕಿದೆ.
ವಿಧಾನಸೌಧದಲ್ಲಿ ನಡೆದ ಕ್ಯಾಬಿನೆಟ್ ಸಭೆ (Cabinet Meeting)ಯಲ್ಲಿ ಬೆಂಗಳೂರನ್ನು 5 ವಿಭಾಗಗಳಾಗಿ ವಿಭಜಿಸುವ ಮಸೂದೆಗೆ ಒಪ್ಪಿಗೆ ನೀಡಿದೆ.
ಬಿ.ಎಸ್. ಪಾಟೀಲ್ ನೇತೃತ್ವದಲ್ಲಿ ನಡೆದ ಗ್ರೇಟರ್ ಬೆಂಗಳೂರು ಅಥಾರಿಟಿ (Greater Bengaluru Authority) ಸಲಹೆಗೆ ಅನುಮೋದನೆ ಸಿಕ್ಕಿದೆ.
ಸಮಿತಿಯ ಶಿಫಾರಸುಗಳನ್ನು ಒಪ್ಪಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದ್ದು ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ ದಟ್ಟವಾಗಿದೆ. ಅಭಿವೃದ್ಧಿ ಹಾಗೂ ತ್ವರಿತ ಕಾರ್ಯಗಳ ಕ್ರಮಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಮೂರು ಪ್ರಮುಖ ವಿಚಾರಗಳ ಬಗ್ಗೆ ವಿಧಾನಸಭೆಯಲ್ಲಿ (Vidhan Sabha) ನಿರ್ಣಯ ಕೈಗೊಳ್ಳಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.








