ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ “ಚಿರಾಪುಂಜಿ” ಆಗುಂಬೆ: ಸೂರ್ಯಾಸ್ತ ನೋಡುವುದೇ ಕಣ್ಣಿಗೆ ಹಬ್ಬ..!

Namratha Rao by Namratha Rao
November 1, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Agumbe

ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯ ಹೇಳಿ ಕೇಳಿ ಪ್ರವಾಸಿತಾಣಗಳಿಗೆ ಫೇಮಸ್.. ಭಾರತದ ಮೂರನೇ ಪ್ರಸಿದ್ಧ ಪ್ರವಾಸಿ ತಾಣಗಳ ರಾಜ್ಯ ಎಂದ್ರೆ ಅದು ಕರುನಾಡು. ಇಂತಹ ಕರ್ನಾಟಕದಲ್ಲೇ ಬರುವ ಒಂದು ಪ್ರಸಿದ್ಧ ಹಾಗೂ ಸುಂದರ ಪ್ರವಾಸಿ ತಾಣವೆಂದ್ರೆ ಅದು ಆಗುಂಬೆ. ಆಗುಂಬೆಯ ಪ್ರಕೃತಿ ಸೌಂದರ್ಯ ಅದ್ವಿತೀಯ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಬರುವ ರೋಮಾಂಚನಕಾರಿ ಅನುಭೂತಿ ನೀಡುವ ಪ್ರಸಿದ್ಧ ಪ್ರವಾಸಿ ತಾಣ.
ಅದ್ರಲ್ಲೂ ಆಗುಂಬೆಯಲ್ಲಿ ಸೂರ್ಯಾಸ್ತ ನೋಡುವುದೇ ಕಣ್ಣಿಗೆ ಹಬ್ಬ. ಇಲ್ಲಿಗೆ ಸೂರ್ಯಾಸ್ತವನ್ನು ನೋಡಲು ನಿತ್ಯ ಸಾವಿರಾರು ಜನರು ಭೇಟಿ ನಿಡ್ತಾರೆ. ಮುಳುಗುವ ಸೂರ್ಯನ ದೃಶ್ಯ ಅತ್ಯಂತ ಮುದನೀಡುತ್ತದೆ. ಆದರೆ ಮಳೆಯೇ ಮಲೆನಾಡಿನ ಜೀವಾಳ. ಮಳೆಗಾಲದಲ್ಲಿ ಕಾದಿದ್ದು, ಸೂರ್ಯಾಸ್ತವನ್ನು ಕಾಣುವುದೇ ಒಂದು ಸಡಗರದ ಸನ್ನಿವೇಶ. ಭಾರತದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳಗಳಲ್ಲಿ ಆಗುಂಬೆಯೂ ಒಂದು. ಈ ಕಾರಣಕ್ಕಗಿಯೆ ಆಗುಂಬೆಯನ್ನು “ದಕ್ಷಿಣದ ಚಿರಾಪುಂಜಿ” ಎಂದೂ ಕರೆಯುತ್ತಾರೆ. ಭಾರತದ ಏಕೈಕ ಶಾಶ್ವತ ಹರಿದ್ವರ್ಣವನ ಸಂಶೋಧನ ಕೇಂದ್ರ ಆಗುಂಬೆಯಲ್ಲಿದೆ. ಹೆಸರುವಾಸಿ ಉರಗತಜ್ಞ ರೊಮುಲುಸ್ ವಿಟೆಕರ್ ಆಗುಂಬೆಯನ್ನು “ಕಾಳಿಂಗ ಸರ್ಪಗಳ ರಾಜಧಾನಿ” ಎಂದು ಕರೆದಿದ್ದಾರೆ.Agumbe

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಸುತ್ತಲೂ ಕಾಡು ಗಿಡಮರಗಳು ದಟ್ಟಾರಣ್ಯದ ನಟ್ಟ ನಡುವೆ ಹಚ್ಚ ಹಸಿರಿನಿಂದ ಕಂಗೊಳಿಸುವ ಆಗುಂಬೆ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನ ಮೂಕವಿಸ್ಮಿತರನ್ನಾಗಿಸುತ್ತೆ. ಸುತ್ತಲೂ ಘಟ್ಟಪ್ರದೇಶಗಳು ಪ್ರಪಾತಗಳಿಂದ ಕೂಡಿರುವ ರಸ್ತೆಯಲ್ಲಿ ಹೋಗುತ್ತಿದ್ರೆ ಒಂದು ಕಡೆ ರೋಮಾಂಚನಕಾರಿ, ಮತ್ತೊಂದೆಡೆ ಪ್ರಕೃತಿಯ ಸೌಂದರ್ಯ ಸವಿಯುವ ಅದೃಷ್ಟ ಸಿಗುತ್ತೆ. ಇನ್ನೂ ಆಗುಂಬೆಯಲ್ಲಿ ರಕ್ತ ಹೀರುವ ಜಿಗಣೆಗಳು ಹೆಚ್ಚಾಗಿಇರುತ್ತವೆ. ಹೀಗಾಗಿ ಈ ಪ್ರದೇಶದಲ್ಲಿ ಕೊಂಚ ಎಚ್ಚರಿಕೆಯಿಂದ ಇರುವುದು ಉತ್ತಮ.Agumbe

ಆಗುಂಬೆ ಜಮದಗ್ನಿ-ರೇಣುಕಾದೇವಿಯರ ಮಗನಾದ ಪರಶುರಾಮನ ಊರು ಎಂಬ ನಂಬಿಕೆ ಇದೆ. ಅವನು ತನ್ನ ತಂದೆಯ ಮರಣಕ್ಕೆ ಕಾರಣನಾದ ಕಾರ್ತವೀರ್ಯಾರ್ಜುನನನ್ನು ಈಶ್ವರದತ್ತವಾದ ತನ್ನ ಪರಶುವಿಗೆ ಬಲಿಗೊಟ್ಟು, ಇಪ್ಪತ್ತೊಂದು ಬಾರಿ ಭೂಪ್ರದಕ್ಷಿಣೆ ಮಾಡಿ ಕ್ಷತ್ರಿಯ ಕುಲವನ್ನೇ ನಿರ್ಮೂಲ ಮಾಡಿದನಂತೆ. ಈ ಕ್ಷತ್ರಿಯಹತ್ಯೆಯ ಪಾಪವನ್ನು ಕಳೆದುಕೊಳ್ಳಲು ಅಶ್ವಮೇಧ ಯಾಗ ಮಾಡಿ, ಆತ ಸಮಸ್ತ ಭೂಮಿಯನ್ನು ಕಶ್ಯಪ ಋಷಿಗೆ ಧಾರೆಯೆರೆದು ದಾನಕೊಟ್ಟನಂತೆ.

Agumbe

ಆಗ ಪರಶುರಾಮನಿಗೆ ಇರಲು ಸ್ಥಳವಿಲ್ಲದೆ ಆಗುಂಬೆಯ ಸಹ್ಯಾದ್ರಿ ಶಿಖರದಲ್ಲಿ ನಿಂತು ಎದುರುಗಡೆಯ ಸಮುದ್ರಕ್ಕೆ ಈ ಪರಶು ಹೋದಷ್ಟು ದೂರ ತನಗೆ ಸ್ಥಳಕೊಡು ಎಂದು ಪ್ರಾರ್ಥಿಸಿ ತನ್ನ ಕೊಡಲಿಯನ್ನು ಎಸೆದನಂತೆ. ಸಮುದ್ರ ಸಹ್ಯಾದ್ರಿಯಿಂದ ಹಿಂದಕ್ಕೆ ಉರುಳಿತಂತೆ. ಅಂದಿನಿಂದ ಆ ಭಾಗದ ಪಶ್ಚಿಮ ಕರಾವಳಿಯೆಲ್ಲ ಪರಶುರಾಮಕ್ಷೇತ್ರವೆಂದು ಹೆಸರಾಯಿತು ಎಂದು ಹೇಳಲಾಗಿದೆ. ಹೀಗೆ ಪೌರಾಣಿಕವಾಗಿಯೂ ಆಗುಂಬೆಗೆ ಮಹತ್ವವಿದೆ.

ಆಗುಂಬೆಯ ಪೇಟೆಯಿಂದ ಸುಮಾರು ಒಂದು ಮೈಲು ಪಶ್ಚಿಮದಲ್ಲಿ ಆಗುಂಬೆಯ ಜಗತ್ಪ್ರಸಿದ್ಧ ಸೂರ್ಯಾಸ್ತಮಾನ ದೃಶ್ಯವನ್ನು ಕಾಣಲು ಬೆಟ್ಟದ ನೆತ್ತಿಯಲ್ಲಿ ಒಂದು ರಂಗಸ್ಥಳವನ್ನು ಮಾಡಿದ್ದಾರೆ. ವರ್ಷವಿಡೀ-ಮಳೆಗಾಲ ಹೊರತು-ಈ ಭೂಮದೃಶ್ಯವನ್ನು ನೋಡಲು ದೇಶೀಯ, ವಿದೇಶೀಯ ಪ್ರವಾಸಿಗಳು ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ. ಮೋಡವಲ್ಲದ ಶುಭ್ರ ಸಂಜೆಗಳಲ್ಲಿ ಸೂರ್ಯಾಸ್ತವನ್ನು ನೋಡಲು ಚೆನ್ನ. ಈ ರಂಗಸ್ಥಳದಿಂದ ಇದ್ದಕ್ಕಿದ್ದಂತೆ ಸುಮಾರು 3,000′ ಪಾತಾಳ ದರ್ಶನ ಮೈನವಿರೇಳಿಸುವಂಥದು. ಕೇವಲ ಆಳ ಮಾತ್ರವಲ್ಲ, ಪಡುಗಡಲ ತಡಿಯವರೆಗಿನ, ಅಲ್ಲಿಂದ ದಿಗಂತದ ಅಂಚಿನವರೆಗಿನ ಸುಮಾರು 30 ಮೈಲುಗಳ ವಿಸ್ತಾರ ಒಮ್ಮೆಗೇ ಕಣ್ಣುಗಳನ್ನು ತುಂಬುತ್ತದೆ. ಆ ಕ್ಷಣದಲ್ಲಿ ಆಗುವ ಅನುಭವ ಮಾತಿಗೆ ಮೀರಿದುದು; ಮೌನವಾಗಿ ಅನುಭವಿಸುವಂಥದು. ಸೂರ್ಯಾಸ್ತಮಾನದ ಸುಂದರದೃಶ್ಯವನ್ನು ನೋಡಲು ರಂಗಸ್ಥಳದಲ್ಲಿ ಸಂಜೆಯ ಹೊತ್ತು ಕುಳಿತು ಪ್ರಕೃತಿ ತೋರುವ ವಿವಿಧವೇಷಗಳನ್ನು ಕಾಣಬೇಕು. ನಿಸರ್ಗ ತನ್ನ ನೂರಾರು ಸೀರೆಗಳನ್ನು ಉಟ್ಟು ಕಳಚುತ್ತಿರುತ್ತದೆ.  ಜೀವಮಾನದಲ್ಲಿ ಒಮ್ಮೆಯಾದರೂ ಆಗುಂಬೆಗೆ ಭೇಟಿ ನೀಡಿ ಇಲ್ಲಿನ ಸೊಬಗನ್ನು ಕಣ್ತುಂಬಿಕೊಳ್ಳಲೇ ಬೇಕು.

Agumbe

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: agumbeshimoggatourism
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram