ಲಾಕ್ ಡೌನ್ ಕುರಿತಾಗಿ ಪ್ರಧಾನಿಗೆ ಸಲಹೆ ಕೊಟ್ಟ ಏಮ್ಸ್ ಮುಖ್ಯಸ್ಥರು
ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಲೆ ಅತಿ ಭಯನಾಕರೂಪ ಪಡೆದಿದ್ದು, ಸಾವು ನೋವುಗಳ ಸಂಖ್ಯೆ , ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಈ ನಡುವೆ ಸುಪ್ರಿಂಕೋರ್ಟ್ , ಅಮೆರಿಕಾ ಸಹ ಭಾರತದಲ್ಲಿ ಕೊರೊನಾ 2ನೇ ಅಲೆಯನ್ನ ತಡೆಯಲು ಲಾಕ್ ಡೌನ್ ಒಂದೇ ಸರಿಯಾದ ಮಾರ್ಗ ೆಂದು ಸಲಹೆ ನೀಡಿತ್ತು.. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಟ್ವೀಟ್ ಮಾಡುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಅಸ್ತ್ರ ಎಂದಿದ್ದರು.
ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿರುವ ಏಮ್ಸ್ ಮುಖ್ಯಸ್ಥರು ಹಾಗೂ ಟಾಸ್ಕ್ ಫೋರ್ಸ್ ಮುಖ್ಯಸ್ಥರು ಲಾಕ್ ಡೌನ್ ಸೂಕ್ತ ಎಂದಿದ್ದಾರೆ ಎಂದು ರಾಷ್ಟ್ರಿಯಾದ ಮಾಧ್ಯಮಗಳು ವರದಿ ಮಾಡಿವೆ.. ಇನ್ನೂ ಸದ್ಯದ ದೇಶದ ಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಿದ್ಯಾ ಅನ್ನೋದನ್ನ ಕಾದು ನೋಡ್ಬೇಕಾಗಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.