ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟಿನ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಐಂದ್ರಿತಾ ರೇ ಮತ್ತು ದಿಗಂತ್ ಗೆ ಸಿಸಿಬಿ ನೊಟೀಸ್ ಜಾರಿ ಮಾಡಿದೆ. ಆದ್ರೆ ಐಂದ್ರಿತಾ ಹಾಗೂ ದಿಗಂತ್ ಸದ್ಯ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಬುಧವಾರ ಬೆಳಗ್ಗೆ ಸಿಸಿಬಿ ಕಚೇರಿಗೆ ಬರುತ್ತಾರಾ ಇಲ್ಲವಾ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಷ್ಟೇ ಅಲ್ಲ ಈ ದಂಪತಿ ಎಸ್ಕೇಪ್ ಆಗಿದೆ ಎಂದೆಲ್ಲಾ ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಈ ಬಗ್ಗೆ ಖುದ್ದು ನಟಿ ಐಂದ್ರಿತಾ ಅವರೇ ಮಾಹಿತಿ ಸಾಮಾಜಿಕ ಜಾಲತಾನಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
‘ಸಿಸಿಬಿ ಜಾರಿ ಮಾಡಿರುವ ನೋಟಿಸ್ ಅನ್ನು ವಾಟ್ಸ್ ಆಪ್ ಮೂಲಕ ಸ್ವೀಕರಿಸಿದ್ದೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿ ನಾವಿಬ್ಬರೂ ಆಗಮಿಸಲಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ’ ಎಂದು ‘ಗುಳಿಕೆನ್ನೆ ಚೆಲುವೆ’ ಐಂದ್ರಿತಾ ಟ್ವೀಟ್ ಮೂಲಕ ತಿಳಿಸಿದ್ದಾರೆ.