ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಗ್‌ಬಾಸ್ ಮನೆಯೊಳಗೆ ಮ್ಯೂಸಿಕ್ ಕ್ಲಾಸ್!

admin by admin
October 20, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಿಗ್‌ಬಾಸ್ ಮನೆಯೊಳಗೆ ಮ್ಯೂಸಿಕ್ ಕ್ಲಾಸ್!

All things Melody at the Bigg Boss Kannada house

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

November 11, 2025

ಇಷ್ಟು ದಿನ ಕೋಪ, ಜಗಳ, ದೂಷಣೆಗಳೇ ಹೆಚ್ಚಾಗಿ ಕೇಳಿಸುತ್ತಿದ್ದ ಬಿಗ್‌ಬಾಸ್‌ ಮನೆಯಲ್ಲಿಂದು ಹಬ್ಬದ ವಾತಾವರಣ. ಅದಕ್ಕೆ ಕಾರಣಗಳು ಹಲವು. ಕಲರ್ಸ್‌ ಕನ್ನಡದಲ್ಲಿ ಪ್ರಾರಂಭವಾಗುತ್ತಿರುವ ‘ಬೃಂದಾವನ’ ಧಾರಾವಾಹಿ ತಂಡ ಬಿಗ್‌ಬಾಸ್‌ ಮನೆಯೊಳಗೆ ಎಂಟ್ರಿ ಕೊಟ್ಟಿದ್ದು, ಅವರೊಂದಿಗೆ ನಕ್ಕು ನಲಿದ ಸ್ಪರ್ಧಿಗಳು ಪರ್ಫಾರ್ಮ್‌ ಮಾಡಿದ್ದಂತೂ ವಿಶೇಷವೇ. ಆದರೆ ಅದರ ಜೊತೆಗೆ ಇನ್ನೂ ಹಲವು ಫೀಲ್‌ಗುಡ್‌ ಸನ್ನಿವೇಶಗಳು ಮನೆಯಲ್ಲಿ ನಡೆದಿವೆ. ನಡೆಯುತ್ತಿವೆ. ಅದರಲ್ಲಿ ಇಶಾನಿ ಮತ್ತು ಸಂಗೀತಾ ಅವರ ಸಂಗೀತ ಕ್ಲಾಸ್‌ ಕೂಡ ಒಂದು.


ಹೆಸರಿನಲ್ಲಿಯೇ ಮ್ಯೂಸಿಕ್ ಇಟ್ಟುಕೊಂಡಿರುವ ಸಂಗೀತಾ ಅವರು ಎಂದಿಗೂ ಸಂಗೀತಪ್ರೇಮಿಯಾಗಿ ಕಾಣಿಸಿಕೊಂಡವರಲ್ಲ. ಇಶಾನಿಯಂತೂ ರಾಪರ್ ಆಗಿಯೇ ಪ್ರಸಿದ್ಧರಾದವರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಬಿಗ್‌ಬಾಸ್‌ ಮನೆಯಲ್ಲಿ ಸಂಗೀತ ಸಂಜೆ ನಡೆದಿದೆ.
ಕಾರ್ತಿಕ್‌ ಮತ್ತು ತನಿಷಾ ಸ್ವಿಮ್ಮಿಂಗ್ ಪೂಲ್‌ ಬಳಿ ಆರಾಮವಾಗಿ ಮಲಗಿಕೊಂಡು ಹರಟೆ ಹೊಡೆಯುತ್ತಿದ್ದರು. ಅಲ್ಲಿಗೆ ಮೊದಲು ಬಂದಿದ್ದು ಇಶಾನಿ. ನಂತರ ಅವರ ಜೊತೆ ನೀತು, ನಮ್ರತಾ ಬಂದು ಕೂಡಿಕೊಂಡರು. ಆಗಲೇ ಇಶಾನಿ ಬಾಯಲ್ಲಿ, ‘ಪರಪ್ಪಪ್ಪಪ್ಪಾ…’ ಎಂದು ಸಂಗೀತದ ಫಲಕುಗಳನ್ನು ಹೇಳಲು ಶುರುಮಾಡಿದ್ದರು.


ಮಳೆ ಬರುವ ಹಾಗಿರುವ ಸಂಜೆ ಎಲ್ಲರಲ್ಲಿಯೂ ಹರಟೆ ಮೂಡ್‌ ಹುಟ್ಟಿಸಿತ್ತು. ನಮ್ರತಾಗೆ ಈ ವಾತಾವರಣದಲ್ಲಿ ಟ್ರಾವೆಲ್ ಮಾಡಬೇಕು ಅನಿಸುತ್ತಿದೆ ಎಂಬ ಅನಿಸಿಕೆಯನನ್ನೂ ಹಂಚಿಕೊಂಡರು. ಈ ಮಾತಿನ ನಡುವೆಯೇ ಕಾರ್ತಿಕ್ ಗರ್ಲ್‌ಫ್ರೆಂಡ್ ಬಗ್ಗೆಯೂ ಚರ್ಚೆ ಬಂತು. ‘ಈಗ ಯಾರು ನಿಂಗೆ ಸ್ಪೆಷಲ್ ಫ್ರೆಂಡ್‌?’ ಎಂದು ನಮ್ರತಾ ಕೇಳಿದರೆ ಕಾರ್ತಿಕ್ ಅಷ್ಟೇ ಚಾಣಕ್ಷತನದಿಂದ, ‘ಫ್ರೆಂಡ್ಸೆಲ್ಲ ಸ್ಪೆಷಲ್ಲೇ’ ಅಂದ್ರು.

ಈ ಹೊತ್ತಿನಲ್ಲಿ ಈ ಗುಂಪಿನಿಂದ ತುಸು ದೂರದಲ್ಲಿ ಬಾಲ್ಕನಿ ಮೇಲೆ, ಮರದ ನೆರಳಿನಲ್ಲಿ ಸಂಗೀತಾ ಕೂತಿದ್ದರು. ಅವರನ್ನು ಸೇರಿಕೊಂಡವರು ಇಶಾನಿ. ‘ಇದು ತುಂಬ ಕಾಮ್‌ ಪ್ಲೇಸ್. ಇಲ್ಲಿನ ಎನರ್ಜಿಯೇ ಡಿಫರೆಂಟ್‌’ ಎಂದರು ಇಶಾನಿ. ಹಕ್ಕಿಗಳ ಕಲರವ, ಮರದ ತಂಪು ಎಲ್ಲದರ ಬಗ್ಗೆ ಸಂಗೀತಾ ಮತ್ತು ಇಶಾನಿ ಮಾತುಕತೆ ಸಾಗಿತು. ಸಂಗೀತಾ ಶಿಳ್ಳೆ ಹಾಕಿ ಹಕ್ಕಿಗಳ ಜೊತೆಗೆ ಮಾತುಕತೆ ನಡೆಸಲೂ ಪ್ರಯತ್ನಿಸಿದರು.

ಆಗಲೇ ಇಶಾನಿ ಮತ್ತೆ, ‘ಪರಪ್ಪಪ್ಪ ಪ್ಪ ಪ್ಪ ಪ್ಪಾ…’ ಎಂದು ಹಾಡಲು ಶುರುಮಾಡಿದರು. ಸಂಗೀತಾಗೆ ಇದ್ದಕ್ಕಿದ್ದ ಹಾಗೆಯೇ ಸಂಗೀತ ಕಲಿಯುವ ಹುಕಿ ಬಂತು. ‘ನಂಗೂ ಕಲಿಸಿಕೊಡಿ’ ಎಂದು ಅವರು ಇಶಾನಿ ಬಳಿಯಿಂದ ಸಂಗೀತ ಹೇಳಿಸಿಕೊಳ್ಳಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, ಗುರುವಿನಿಂದ ಶಹಭಾಶ್‌ಗಿರಿಯನ್ನೂ ಪಡೆದುಕೊಂಡರು.

 


ಅತ್ತ ಕಡೆ ವರ್ತೂರ್ ಸಂತೋಷ್‌ ಮತ್ತಿತರರು ಕೃಷಿಯ ಕುರಿತಾಗಿ ಜೋರು ಜೋರಾಗಿ ಮಾತುಕತೆ ನಡೆಸುತ್ತಿದ್ದರೆ ಇತ್ತ ಬಾಲ್ಕನಿಯಲ್ಲಿ ಸಂಗೀತದ ಅಲೆಗಳು ಸಂಜೆಯ ತಂಗಾಳಿಯ ಹಾಗೆ ಸುಳಿಯುತ್ತಿದ್ದವು.
ರಾಪ್‌ ಸ್ಟೈಲ್‌ನಿಂದ ಇಶಾನಿ ಕ್ಲಾಸಿಕಲ್ ಮ್ಯೂಸಿಕ್ ಕಡೆಗೆ ಹೊರಳಿ, ‘ಸ ರಿ ಗ ಮ ಪ ದ ನಿ ಸ; ಸ ನಿ ದ ಪ ಮ ಗ ರಿ ಸ’ ಎಂದು ಸಂಗೀತಾ ಮತ್ತು ಇಶಾನಿ ಇಬ್ಬರೂ ಒಟ್ಟಿಗೇ ಹೇಳಿದರು. ಸಂಗೀತ ಅವರೂ ತಮಗಿರುವ ಸಂಗೀತದ ಅರಿವನ್ನು ಹಂಚಿಕೊಂಡರು. ಕೆಲವು ಕಾಲ ಇಶಾನಿ ಮತ್ತು ಸಂಗೀತಾ ನಡುವೆ ನಡೆದ ಈ ಸಂಗೀತದ ಜುಗಲ್ಬಂದಿ ನಿಜಕ್ಕೂ ಕುತೂಹಲಕಾರಿಯಾಗಿತ್ತು.

‘ಹಿಂದೆ ಡಾನ್ಸ್ ಕಲಿಯಬೇಕಿದ್ದರೆ ನನಗೆ ಸಂಗೀತ ಕಲಿಸುತ್ತಿದ್ದರು. ನನಗೆ ಸಂಗೀತವೆಂದರೆ ಆಗುತ್ತಿರಲಿಲ್ಲ. ನಿನ್ನ ಹೆಸರು ಸಂಗೀತ ಅಲ್ವಾ? ಹಾಡು ಹೇಳು ಅಂತಿದ್ರು. ಆಗೆಲ್ಲ ನಂಗೆ ಕಿರಿಕಿರಿಯಾಗುತ್ತಿತ್ತು. ಒಂದು ಹಾಡಿತ್ತು. ಯಾರೇ ಕೇಳಿದ್ರೂ ನಾನು ಆ ಹಾಡು ಹೇಳ್ತಿದ್ದೆ’ ಎಂದು ಸಂಗೀತಾ ಸಂಗೀತದ ಜೊತೆಗಿನ ತಮ್ಮ ಒಡನಾಟದ ನೆನಪನ್ನು ಹಂಚಿಕೊಂಡರು.


ಇಶಾನಿ ತಮಗೆ ಕರ್ನಾಟಿಕ್ ಶಾಸ್ತ್ರೀಯ ಸಂಗೀತ ಕಲಿಯುವ ಹಂಬಲ ಇರುವುದನ್ನು ಹೇಳಿಕೊಂಡರು. ಜೊತೆಗೆ ಪಾಶ್ಚಾತ್ಯ ಮತ್ತು ಭಾರತೀಯ ಸಂಗೀತದ ನಡುವಿನ ವ್ಯತ್ಯಾಸಗಳ ಬಗ್ಗೆಯೂ ಹೇಳಿಕೊಂಡರು. ಸಂಗೀತಾ ತುಂಬ ಆಸಕ್ತಿಯಲ್ಲಿ ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದರು.
ಮುಸ್ಸಂಜೆಯಲ್ಲಿ ಮನೆಯೊಳಗಿನ ದೀಪಗಳೆಲ್ಲ ಬೆಳಗಿದ್ದರೂ ಸಂಗೀತಾ ಮತ್ತು ಇಶಾನಿ ಸಂಗೀತ ಕಛೇರಿ ಮುಂದುವರಿದೇ ಇತ್ತು. ರಾಪರ್ ಬಾಯಲ್ಲಿ ‘ಸರಿಗಮಪದನಿಸ’ ಸುಮಧುರವಾಗಿ ಹೊಮ್ಮಿದ ಕ್ಷಣಗಳಿಗೆ ಈ ದಿನದ ಬಿಗ್‌ಬಾಸ್‌ ಮನೆ ಸಾಕ್ಷಿಯಾಯ್ತು.

https://www.jiocinema.com/videos/bigg-boss-kannada-24hrs-live-channel/3831324
ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಗೆ ವೀಕ್ಷಿಸಿ.

#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: bbk 10bbk 10 kannadabbk 10 trollbigg boss 10bigg boss 10 contestantsbigg boss kannada 10bigg boss kannada season 10bigg boss kannada season 10 contestantsbigg boss kannada season 10 promobigg boss kannada season 10 updatebigg boss season 10bigg boss season 10 kannada contestants listbigg boss season 10 ಸ್ಪರ್ಧಿಗಳ ಹೆಸರು ಬಿಡುಗಡೆbiggboss kannada season 10colors kannada bigg boss season 10ಬಿಗ್ಬಾಸ್ ಸೀಸನ್ 10 ಸ್ಪರ್ಧಿಗಳು
ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

by Shwetha
November 11, 2025
0

ಮಧ್ಯಪ್ರದೇಶದ ಪದ್ಮರ್ಹಿ ಗಿರಿಧಾಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ತರಬೇತಿ ಶಿಬಿರದಲ್ಲಿ ವಿಶೇಷ ಘಟನೆ ನಡೆದಿದೆ. ತರಬೇತಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 10...

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

by Shwetha
November 11, 2025
0

ತಿರುಪತಿಯ ಪವಿತ್ರ ಲಡ್ಡು ಪ್ರಸಾದದ ಶುದ್ಧತೆಗೆ ಕಳಂಕ ತರುವಂತಹ ಆಘಾತಕಾರಿ ಹಗರಣವೊಂದು ಸಿಬಿಐ ತನಿಖೆಯಿಂದ ಹೊರಬಿದ್ದಿದೆ. ಉತ್ತರಾಖಂಡ ಮೂಲದ ಡೈರಿಯೊಂದು ಒಂದೇ ಒಂದು ಹನಿ ಹಾಲು ಅಥವಾ...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram