ಧರ್ಮಸ್ಥಳದಲ್ಲಿ ಹಾಲಿ – ಮಾಜಿ MLA ಆಣೆ ಪ್ರಮಾಣ
ಅಕ್ರಮ ಮರಳು ದಂಧೆಯಿಂದ ಕಮಿಷನ್ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಹರತಾಳು ಹಾಲಪ್ಪ ಪ್ರಮಾಣ ಮಾಡಿದ್ದಾರೆ.
ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ವಿರುದ್ಧ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಮಿಷನ್ ಆರೋಪ ಮಾಡಿದ್ದರು. ಈ ಬಗ್ಗೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ರೆಡಿ ಅಂತ ಬೇಳೂರು ಹೇಳಿದ್ದರು,
ಇದನ್ನ ಸವಾಲಾಗಿ ಸ್ವೀಕರಿಸಿದ ಹಾಲಪ್ಪ ಮಂಜುನಾಥಸ್ವಾಮಿ ದರ್ಶನ ಪಡೆದು ಆಣೆ ಪ್ರಮಾಣ ಮಾಡಿದ್ದಾರೆ. ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆಶೀರ್ವಾದ ಕೂಡ ಪಡೆದುಕೊಂಡಿದ್ದಾರೆ.
ದೇವರ ದರ್ಶನದ ನಂತರ ಪ್ರತಕ್ರಿಯಿಸಿದ ಶಾಸಕ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣಗೆ ಬುದ್ಧಿ ಭ್ರಮಣೆಯಾಗಿ ಆರೋಪ ಮಾಡಿದ್ದಾರೆ .ದೇವರ ಎದುರು ನಾನು ಆಣೆ ಪ್ರಮಾಣ ಮಾಡಿದ್ದೇನೆ, ವಿನಾಯಕ ಭಟ್ ಕೂಡಾ ಪ್ರಮಾಣ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ಹಾಲಪ್ಪ ಪ್ರತಿಕ್ರಿಯಿಸಿದ್ದಾರೆ..