ಅಂಬರೀಶ್ ಸ್ಮಾರಕ ಅಭಿವೃದ್ಧಿಗೆ 12 ಕೋಟಿ ರೂ. ಮಂಜೂರು
ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ಅಭಿವೃದದ್ಧಿಗೆ ಸರ್ಕಾರದಿಂದ 12 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.. ಇಂದು ಸಂಪುಟ ಸಭೆಯಲ್ಲಿ ಅಂಬರೀಶ್ ಸ್ಮಾರಕ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದೆ.. ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ಅಭಿವೃದ್ಧಿ ಪಡಿಸಲು ಯೋಜನೆ ಸಿದ್ಧವಾಗಿದೆ..
ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ನೀಡಲಾಗಿತ್ತು. ಈಗ ಮತ್ತೆ 12 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.
ಪುನೀತ್ ರಾಜ್ಕುಮಾರ್ ನಿಧನ ಹೊಂದಿದಾಗ ಸರ್ಕಾರವು ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು, ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದರು. ಆ ಸಂದರ್ಭದಲ್ಲಿ ಅಂಬರೀಶ್ ಅಭಿಮಾನಿಗಳು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿ, ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಬೇಕು, ಅಂಬರೀಶ್ ಗೆ ಪದ್ಮ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದರು.