ಕೋವಿಡ್ ಕಾರಣದಿಂದಾಗಿ ರದ್ದಾಗಿದ್ದ ಅಮರನಾಥ ಯಾತ್ರೆಯು ಸುಮಾರು 2 ವರ್ಷಗಳ ನಂತರ ಮತ್ತೆ ಪ್ರಾರಂಭವಾಗಿದೆ.. ಇಂದಿನಿಂದ ಯಾತ್ರೆ ಆರಂಭವಾಗಿದ್ದು , ಯಾತ್ರಿಕರು ಮೊದಲ ಬ್ಯಾಚ್ ನಲ್ಲಿ ಯಾತ್ರೆ ಆರಂಭಿಸಿದ್ದಾರೆ..
ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.
ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್ಪ್ರಸಿದ್ಧವಾಗಿದೆ.
ಪ್ರಯಾಣವು ಬಹುತೇಕ ಕಾಲ್ನಡಿಗೆಯಲ್ಲೇ ಪ್ರಯಾಣಿಸುತ್ತಾರೆ, ಮಾರ್ಗದುದ್ದಕ್ಕೂ ಶೀಷ್ ನಾಗ್ ಮತ್ತು ಪಂಚತಾರ್ಣಿಯಲ್ಲಿ ರಾತ್ರಿ ವ್ಯವಸ್ಥೆ ಮಾಡಲಾಗಿದೆ. 43 ದಿನಗಳ ಯಾತ್ರೆಯನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.. ಯಾತ್ರಾರ್ಥಿಗಳಿಗೆ ಬಿಗಿ ಭದ್ರತೆಯನ್ನೂ ಒದಗಿಸಲಾಗಿದೆ..
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡಿದರು. ಅಮರನಾಥ ದೇಗುಲ ಮಂಡಳಿ ಸಹ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಆನ್ ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಆಡಳಿತವು ಪವಿತ್ರ ಗುಹೆಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಲ್ಲಿ ಭಾರೀ ಭದ್ರತೆಯನ್ನು ಒದಗಿಸುವ ಮೂಲಕ ಉಗ್ರರ ದಾಳಿಯನ್ನು ತಪ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಯಾತ್ರಾರ್ಥಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. 109 ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್ಗಳ ವ್ಯವಸ್ಥೆ ಸಹ ಇದೆ. ಪ್ರಾಥಮಿಕ ಚಿಕಿತ್ಸೆಯ ಸಾಮಾಗ್ರಿಗಳನ್ನು ಯಾತ್ರೆ ಮಾರ್ಗ ಮಧ್ಯೆ ಇಡಲಾಗಿದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದಾಗಿದೆ..








