ಮಂಡ್ಯಕ್ಕೆ ಅಂಬರೀಶ್ ಕೊಡುಗೆ ಶೂನ್ಯ : ಶಿವರಾಮೇಗೌಡ
ಮಂಡ್ಯ : ಕರ್ಣ ಎಂದು ಹೆಸರು ಪಡೆದಿರುವ ಅಂಬರೀಶ್ ರವರ ಕೊಡುಗೆಯೂ ಮಂಡ್ಯಕ್ಕೆ ಶೂನ್ಯ. ಸಂಸದೆ ಸುಮಲತಾ ಕೊರೊನಾ ಕಾಲದಲ್ಲಿ ಏನು ಮಾಡಿದ್ದಾರೆ ಎಂದು ಜೆಡಿಎಸ್ ಮಾಜಿ ಸಂಸದ ಶಿವರಾಮೇಗೌಡ ಪ್ರಶ್ನೆ ಮಾಡಿದ್ದಾರೆ.
ನಾಗಮಂಗಲದಲ್ಲಿ ಸದ್ಯದ ಬೆಳವಣಿಗೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮೇಗೌಡ, ಸಿನಿಮಾ ರೀತಿಯಲ್ಲಿಯೇ ಸಂಸದೆಯಾಗಿ ಸುಮಲತಾ ಅಂಬರೀಶ್ ನಟನೆ ಮಾಡುತ್ತಿದ್ದಾರೆ. ಕರ್ಣ ಎಂದು ಹೆಸರು ಪಡೆದಿರುವ ಅಂಬರೀಶ್ ರವರ ಕೊಡುಗೆಯೂ ಮಂಡ್ಯಕ್ಕೆ ಶೂನ್ಯ. ಸಂಸದೆ ಸುಮಲತಾ ಕೊರೊನಾ ಕಾಲದಲ್ಲಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಇನ್ನು ಮುಂಬರುವ ಜಿಲ್ಲಾ ಪಂಚಾಯತಿ ಚುನಾವಣೆಗೆ ಸ್ವಾಭಿಮಾನದ ಅಭ್ಯರ್ಥಿಗಳನ್ನು ಸುಮಲತಾರವರು ಹಾಕಲಿ ಇದು ಚಾಲೆಂಜ್. ಜೊತೆಗೆ ಸುಮಲತಾಗೆ ಸರಿಯಾದ ಅಡ್ವೈಸರ್ ಇಲ್ಲ. ಅವರು ಒಂದು ಪಕ್ಷಕ್ಕೆ ಸೇರಿಕೊಳ್ಳಲಿ, ಬಿಜೆಪಿ ಇಲ್ಲ, ಕಾಂಗ್ರೆಸ್ ಯಾವುದಾದರೂ ಸೇರಲಿ ಯಾವ ಪಕ್ಷವನ್ನು ಸೇರದಿದ್ದರೆ ವಾಟ್ ನೆಕ್ಟ್ ಎಂದು ಪ್ರಶ್ನಿಸಿದರು.
ಮುಂದುವರೆದು ಸುಮಲತಾ ಅವರ ವಿರುದ್ಧ ಕಿಡಿಕಾರಿದ ಶಿವರಾಮೇಗೌಡ, ಸುಮಲತಾ ಮಂಡ್ಯ ಪಾಲಿಟಿಕ್ಸ್ ನಲ್ಲಿ ಬಿಗ್ ಜೀರೋ. ಆಕೆ ಬಗ್ಗೆ ಮಾತನಾಡದಂತೆ ನಮ್ಮ ನಾಯಕರಲ್ಲಿ ಮನವಿ ಮಾಡುತ್ತೇನೆ. ದೊಡ್ಡ ಸೊನ್ನೆಯಾಗಿರುವಾಗ ಅಂಬರೀಶ್ ಹೆಸರು ಹೇಳಿಕೊಂಡು ಹೋದವರು ಯಾರು..? ಅಂಬರೀಶ್ ಗುಣಾನೇ ಬೇರೆ ಸುಮಲತಾ ಗುಣಾನೇ ಬೇರೆ. ಅಂಬರೀಶ್ ಪತ್ನಿ ಎಂದು ಹೈಜಾಕ್ ಮಾಡಿ ಮಂಡ್ಯ ಜನರ ಮನಸ್ಸು ಗೆದ್ದಿದ್ದಾರೆ ಅಷ್ಟೇ. ಅಂಬರೀಶ್ ಕಾಲದಲ್ಲೂ ಗಣಿ ನಡೆಯುತ್ತಿತ್ತು ಅಲ್ವಾ? ಆಗ ಯಾಕೆ ಇಯಮ್ಮ ನಿಲ್ಲಿಸಲಿಲ್ಲ ಎಂದು ಪ್ರಶ್ನೆ ಮಾಡಿದರು.