Amit Shah : ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪ್ರತಿಕ್ರಿಯೆ ನೀಡಿದ ಅಮಿತ್ ಶಾ….
ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿರುವ ಅದಾನಿ – ಹಿಂಡೆನ್ ಬರ್ಗ್ ವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಈ ವಿವಾದದ ಕುರಿತು ಸಮಿತಿಯನ್ನು ರಚಿಸಿದ್ದು, ಸಾಕ್ಷ್ಯಾಧಾರಗಳು ಮತ್ತು ಪುರಾವೆಗಳಿದ್ದವರು ಅದನ್ನ ಸಮಿತಿಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. ಶುಕ್ರವಾರ ಇಂಡಿಯಾ ಟುಡೇ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಈ ಕುರಿತು ಪ್ರಶ್ನಿಸಿದಾಗ ಈ ಉತ್ತರವನ್ನ ನೀಡಿದ್ದಾರೆ.
“ಯಾರೇ ತಪ್ಪು ಮಾಡಿದರೂ ಏನೂ ಉಳಿಯುವುದಿಲ್ಲ. ನ್ಯಾಯಾಂಗ ವ್ಯವಸ್ಥೆಯ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರಿಗೂ ನಂಬಿಕೆ ಇರಬೇಕು. ಆಧಾರ ರಹಿತ ಆರೋಪ ಮಾಡಬೇಡಿ. ಹಾಗೆ ಮಾಡಿದರೂ ಅವು ಹೆಚ್ಚು ಕಾಲ ಉಳಿಯುವುದಿಲ್ಲ. ಅದಾನಿ ವಿವಾದದ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಸೆಬಿ ಅಫಿಡವಿಟ್ನಲ್ಲಿ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ತನಿಖೆಯನ್ನು ಮುಂದುವರಿಸುವಂತೆ ಸೆಬಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಏಕಕಾಲಕ್ಕೆ ಎರಡು ತನಿಖೆಗಳು ನಡೆಯುತ್ತಿವೆ ಎಂದರು. ಅದಾನಿ ಗ್ರೂಪ್ ತನಿಖೆಗೆ ಸುಪ್ರೀಂ ಕೋರ್ಟ್ ಆರು ಮಂದಿ ತಜ್ಞರನ್ನೊಳಗೊಂಡ ಸಮಿತಿಯನ್ನು ನೇಮಿಸಿರುವುದು ಗೊತ್ತೇ ಇದೆ. ಸಮಿತಿಯಲ್ಲಿ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ, ನಂದನ್ ನಿಲೇಕಣಿ, ನ್ಯಾಯಮೂರ್ತಿ ಜೆಪಿ ದೇವಧರ್, ಸೋಮಶೇಖರ್ ಸುಂದರೇಶನ್, ಓಂ ಪ್ರಕಾಶ್ ಭಟ್ ಮತ್ತು ಕೆವಿ ಕಾಮತ್ ಇದ್ದಾರೆ.
ಅಮೆರಿಕದ ಹಿಂಡೆನ್ಬರ್ಗ್ ರಿಸರ್ಚ್ ಎಂಬ ಕಂಪನಿಯು ಅದಾನಿ ಗ್ರೂಪ್ ಮೇಲೆ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಇತರ ಅಕ್ರಮಗಳನ್ನು ಆರೋಪಿಸಿದೆ ಎಂದು ತಿಳಿದಿದೆ. ಇದರಿಂದಾಗಿ ಅದಾನಿ ಸಮೂಹದ ಸಂಪತ್ತು ದೊಡ್ಡ ಪ್ರಮಾಣದಲ್ಲಿ ಕುಸಿದಿತ್ತು. ಒಂದು ತಿಂಗಳೊಳಗೆ ಅದಾನಿ ಆಸ್ತಿಯಲ್ಲಿ ಅರ್ಧದಷ್ಟು ಕಡಿಮೆಯಾಗಿದೆ. ಈ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.
Amit Shah: Amit Shah has finally responded regarding the Adani case….