ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಶುಭ ಕೋರಿದ್ದಲ್ಲದೇ, ಬೇರೆ ಕ್ಷೇತ್ರಗಳಿಂದಲೂ ಬಿಜೆಪಿ ಗೆಲ್ಲಿಸುವಂತೆ ಕರೆ ಹೇಳಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕ ನಂತರ ಅಮಿತ್ ಶಾ ಅವರು ಬೊಮ್ಮಾಯಿಗೆ ಕರೆ ಮಾಡಿದ್ದಾರೆ. ಕ್ಷೇತ್ರದ ಗೆಲುವಿನ ಜೊತೆಗೆ ಇನ್ನಿತರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಗೆಲ್ಲಿಸುಕೊಂಡು ಬರುವಂತೆ ಸೂಚಿಸಿದ್ದಾರೆ. ಅಲ್ಲದೇ, ಟಿಕೆಟ್ ಸಿಗುತ್ತಿದ್ದಂತೆ ಮಾತನಾಡಿದ ಬೊಮ್ಮಾಯಿ, ನನ್ನ ಕ್ಷೇತ್ರದವರು, ನನ್ನ ಮೇಲೆ ಇಟ್ಟ ವಿಶ್ವಾಸಕ್ಕೆ ಬೆಲೆ ಕೊಡಲು ಸಾಧ್ಯವಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ನನ್ನ ಮೇಲೆ ಬಹಳ ಪ್ರೀತಿ ತೋರಿಸಿದ್ದಾರೆ. ಹೈಕಮಾಂಡ್ ನಾಯಕರು ನನ್ನ ಮೇಲೆ ನಿರೀಕ್ಷೆ ಇಟ್ಟು ನೀವೇ ಸ್ಪರ್ಧಿಸಬೇಕು ಎಂದು ಹೇಳಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಶಿವಕುಮಾರ ಉದಾಸಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರು ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರಿಗೆ ಟಿಕೆಟ್ ಸಿಕ್ಕಿದೆ.