ನವದೆಹಲಿ: ಗಡಿ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಪದೇ ಪದೇ ತರಾಟೆಗೆ ತೆಗೆದುಕೊಳ್ಳುತ್ತಿರುವ ರಾಹುಲ್ಗಾಂಧಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊಸ ಸವಾಲು ಹಾಕಿದ್ದಾರೆ.
“1962ರಿಂದ ಇಲ್ಲಿಯವರೆಗೆ ಗಡಿ ವಿಚಾರದಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ಚರ್ಚೆಗೆ ನಾವು ಸಿದ್ದರಿದ್ದೇವೆ. ಈ ಬಗ್ಗೆ ಸಂಸತ್ತಿನಲ್ಲಿ ಸುದೀರ್ಘ ಚರ್ಚೆಗೆ ನಾವು ರೆಡಿ ಇದ್ದೇವೆ, ತಾಕತ್ತಿದ್ದರೆ ನೀವು ಚರ್ಚೆಗೆ ರೆಡಿನಾ” ಎಂದು ಅಮಿತ್ ಶಾ ರಾಹುಲ್ಗಾಂಧಿಗೆ ಟಾಂಗ್ ನೀಡಿದ್ದಾರೆ.
ಚೀನಾ, ಪಾಕಿಸ್ತಾನ ಗಡಿ ವಿವಾದಗಳು ಬಂದಾಗ ರಾಹುಲ್ಗಾಂಧಿ ಕೀಳುಮಟ್ಟದ ರಾಜಕಾರಣ ಮಾಡುತ್ತಾರೆ. ಆಳವಾದ ಜ್ಞಾನವಿಲ್ಲದವರು ಮಾತ್ರ ಇಂತಹ ಕೀಳುಮಟ್ಟದ ರಾಜಕಾರಣ ಮಾಡುತ್ತಾರೆ. ಭಾರತ ವಿರೋಧಿ ಅಪಪ್ರಚಾರದ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಆದರೆ, ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ದೇಶದ ದೊಡ್ಡ ಪಕ್ಷವೊಂದರ ಅಧ್ಯಕ್ಷರಾಗಿದ್ದವರು ಕೀಳುಮಟ್ಟದ ರಾಜಕಾರಣ ಮಾಡುತ್ತಿರುವುದನ್ನು ನೋಡಿದರೆ ನೋವಾಗುತ್ತದೆ ಎಂದು ಶಾ ಬೇಸರ ವ್ಯಕ್ತಪಡಿಸಿದ್ದಾರೆ.
ಎಎನ್ಐಗೆ ನೀಡಿದ ಸಂದರ್ಶನ ಮಾಡಿದ ಅಮಿತ್ ಶಾ, `ಮೋದಿ ಶರಣಾಗಿದ್ದಾರೆ’ ಎಂದು ಹ್ಯಾಶ್ಟ್ಯಾಗ್ ಹಾಕುವ ಮುನ್ನ ರಾಹುಲ್ಗಾಂಧಿ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








