ತ್ರಿವಿಧ ದಾಸೋಹಿಯ ಗದ್ದುಗೆಗೆ ಪೂಜೆ ಸಲ್ಲಿಸದ ಅಮಿತ್ ಶಾ
ತುಮಕೂರು: ತ್ರೀವಿಧ ದಾಸೋಹಿ ಡಾ. ಶಿವಕುಮಾರ ಸ್ವಮಿಜಿ ಅವರ 115ನೇ ಜಯಂತೋತ್ಸವದ ಹಿನ್ನಲೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ.
ತುಮಕೂರು ವಿವಿಯ ಹೆಲಿಪ್ಯಾಡ್ಗೆ ಅಮಿತ್ ಶಾ ಆಗಮಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅಮಿತ್ ಶಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ರಸ್ತೆ ಮಾರ್ಗವಾಗಿ ಶ್ರೀ ಮಠಕ್ಕೆ ಆಗಮಿಸಿದರು.
ಶ್ರೀ ಮಠಕ್ಕೆ ಅಮಿತ್ ಶಾ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹೂವು ಹಾಕಿ ಸ್ವಾಗತಿಸಿದ್ದು, ವಿದ್ಯಾರ್ಥಿಗಳು ಪೂರ್ಣ ಕುಂಬದ ಮೂಲಕ ಬರಮಾಡಿಕೊಂಡರು. ನಂತರ ಶಾ ಶ್ರೀಗಳ ಪಾವನ ಗದ್ದುಗೆ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಶ್ರೀ ಮಠದಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ನಡೆಯುತ್ತಿದೆ. ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ ನೀಡಿದ್ದಾರೆ. ಈ ವೇಳೆ, ಬಿಸಿಯೂಟ ಯೋಜನೆಗೆ ಡಾ. ಶಿವಕುಮಾರಶ್ರೀಗಳ ಹೆಸರಿಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದಾರೆ.
ಇಂದು (ಏಪ್ರಿಲ್ 1) ದಿನಪೂರ್ತಿ ಕಾರ್ಯಕ್ರಮ ಇರಲಿದ್ದು ಸುಮಾರು 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಆಗಮಿಸಿದವರಿಗೆ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮಗಳು ಇರಲಿದೆ.