ಬೆಳಗಾವಿ: ಬಿಜೆಪಿಯ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಕುಂದಾನಗರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಗೆ ಆಗಮಿಸಿದ ನಂತರ ಅಮಿತ್ ಶಾ, ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.
ಶಾ ಸ್ವಾಗತಕ್ಕೆ ಕಿತ್ತಾಟ..
ಅಮಿತ್ ಶಾ ಅವರಿಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸುವ ವಿಚಾರದಲ್ಲಿ ಬಿಜೆಪಿ ನಾಯಕಿಯರಾದ ಡಾ.ಸೋನಾಲಿ ಸೋನಾರ್ಬತ್, ದೀಪಾ ಕುಡಚಿ ಜಟಾಪಟಿ ಮಾಡಿಕೊಂಡಿದ್ದಾರೆ.
ಡಾ.ಸೋನಾಲಿ ಸೋನಾರ್ಬತ್ ಅವರಂತೆ ದೀಪಾ ಕುಡಚಿ ಕೂಡ ಹೂಗುಚ್ಚ ಹಿಡಿದು ಅಮಿತ್ ಶಾ ಅವರ ಸ್ವಾಗತಕ್ಕೆ ಕಾಯುತ್ತಿದ್ದರು. ಈ ವೇಳೆ ತಗಾದೆ ತೆಗೆದ ಡಾ.ಸೋನಾಲಿ ಸೋನಾರ್ಬತ್, ದೀಪಾ ಕುಡಚಿ ಸ್ವಾಗತ ಸಮಿತಿಯಲ್ಲಿ ಇಲ್ಲ. ಅವರಿಗೆ ಪಾಸ್ ಇಲ್ಲದೇ ಇದ್ದರೂ ವಿಮಾನ ನಿಲ್ದಾಣದ ಒಳಗೆ ಹೇಗೆ ಬಿಟ್ಟಿದ್ದೀರಿ ಎಂದು ಕೂಗಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೀಪಾ ಕುಡಚಿ ಬಿಜೆಪಿ ನಾಯಕರ ಮುಂದೆ ಅಳಲು ತೋಡಿಕೊಂಡಿದ್ದು, ಈ ಜಡೆ ಜಗಳ ಮುಂದೆ ಯಾವ ಸ್ವರೂಪ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel