ADVERTISEMENT
Tuesday, April 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತಮಿಳುನಾಡಲ್ಲಿ ಕಮಲ ಅರಳಿಸುವ ತಂತ್ರ: ಅಮಿತ್ ಶಾ ಇಂದಿನ ಭೇಟಿ ಹಿಂದಿದ್ಯಾ ಮೆಗಾ ಪ್ಲಾನ್..!

Kariyappa N by Kariyappa N
November 21, 2020
in National, Newsbeat, Politics, ದೇಶ - ವಿದೇಶ, ರಾಜ್ಯ
Share on FacebookShare on TwitterShare on WhatsappShare on Telegram

ನವದೆಹಲಿ: ಮುಂಬರುವ ಫೆಬ್ರವರಿ ತಿಂಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಭಾರತದಲ್ಲಿ ಅದರಲ್ಲೂ ದ್ರಾವಿಡರ ನೆಲದಲ್ಲಿ ಕಮಲ ಅರಳಿಸುವ ಬಿಜೆಪಿಯ ಹಲವು ವರ್ಷಗಳ ಪ್ರಯತ್ನ ಸಫಲವಾಗಿಲ್ಲ.
ಈ ಬಾರಿ ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆ ಒದಗಿಸಲೇಬೇಕೆಂಬ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಂಕಲ್ಪ ತೊಟ್ಟಂತೆ ಕಾಣುತ್ತಿದೆ. ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಲೇ ತಮಿಳುನಾಡಿನಲ್ಲಿ ಭದ್ರ ಅಡಿಪಾಯ ಹಾಕಲು ಅಮಿತ್ ಶಾ ಇಂದು ಭೇಟಿ ನೀಡುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.


ಸರ್ಕಾರಿ ಕಾರ್ಯಕ್ರಮವೊಂದರ ಉದ್ಘಾಟನೆ ನೆಪದಲ್ಲಿ ಹಲವು ತಿಂಗಳ ನಂತರ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ. ಆದರೆ, ಅಮಿತ್ ಶಾ ಭೇಟಿ ಉದ್ದೇಶವೇ ತಮಿಳರ ನಾಡಲ್ಲಿ ಬಿಜೆಪಿಗೆ ನೆಲೆ ಕಂಡುಕೊಳ್ಳುವ ಪ್ರಯತ್ನದ ಮೊದಲ ಭಾಗ ಎನ್ನಲಾಗಿದೆ.
ಈಗಾಗಲೇ ಹಿರಿಯ ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಜತೆಗೆ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ ಪ್ರಯತ್ನ ಮುಂದುವರೆಸಿದ್ದಾರೆ. ಹೀಗಾಗಿ ತಮಿಳುನಾಡಿನಲ್ಲಿ ಕಮಲ ಅರಳಿಸಲು ಏನೆಲ್ಲಾ ಪ್ಲಾನಿಂಗ್ ಬೇಕೋ ಅದಕ್ಕೆ ಮುನ್ನುಡಿ ಬರೆಯಲು ಅಮಿತ್ ಶಾ ಭೇಟಿಯ ಉದ್ದೇಶವಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

Related posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

April 28, 2026
ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

April 28, 2026

ಎಂ.ಕೆ ಅಳಗಿರಿ ಜತೆ ಮೈತ್ರಿ ಮಾಡಿಕೊಳ್ತಾರಾ ಅಮಿತ್ ಶಾ..?
ತಮಿಳುನಾಡಿನಲ್ಲಿ ಸದ್ಯ ಸಂಗಿದ್ಧ ರಾಜಕೀಯ ಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನವರೆಗೆ ತಮಿಳುನಾಡಿನ ರಾಜಕೀಯವನ್ನು ಆಕ್ರಮಿಸಿಕೊಂಡು ಪ್ರಬಲವಾಗಿ ಬೆಳೆದಿದ್ದ ಡಿಎಂಕೆ ಸಂಸ್ಥಾಪಕರಾಗಿದ್ದ ಕರುಣಾನಿಧಿ ಕಾಲ ವಶರಾಗಿದ್ದರೆ, ಎಐಎಡಿಎಂಕೆ ಪ್ರಶ್ನಾತೀತ ನಾಯಕಿಯಾಗಿದ್ದ ಜಯಲಲಿತಾ ವಿಧಿವಶರಾಗಿದ್ದಾರೆ.
ತಮಿಳುನಾಡಿನಲ್ಲಿ ಕರುಣಾನಿಧಿ ಹಾಗೂ ಜಯಲಲಿತಾ ನಡುವೆಯೂ ಪ್ರತಿ ಚುನಾವಣೆಯಲ್ಲೂ ನೇರ ಹಾಗೂ ಪ್ರಬಲ ಸ್ಪರ್ಧೆ ನಡೆಯುತ್ತಿತ್ತು. ಒಂದು ಬಾರಿ ಅಧಿಕಾರಕ್ಕೆ ಬಂದವರು, ಮತ್ತೊಂದು ಬಾರಿ ಪ್ರತಿಪಕ್ಷದಲ್ಲಿ ಕೂರುತ್ತಿದ್ದರು. ಹೀಗಾಗಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ತಮಿಳುನಾಡಿನಲ್ಲಿ ನೆಲೆ ಇಲ್ಲದಂತೆ ಮಾಡಿದ್ದ ಅತಿದೊಡ್ಡ ಶಕ್ತಿ ಕರುನಾನಿಧಿ ಹಾಗೂ ಜಯಲಲಿತಾ ಅವರದ್ದಾಗಿತ್ತು.


ಈಗ ಅವರಿಬ್ಬರೂ ಇಲ್ಲವಾಗಿದ್ದರಿಂದ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ ಹಾಗೂ ಎಐಎಡಿಎಂಕೆ ಪ್ರಭಲ ನಾಯಕರಿಲ್ಲ. ಹೀಗಾಗಿ ಈ ಸದಾವಕಾಶವನ್ನೇ ಸಮರ್ಥವಾಗಿ ಬಳಸಿಕೊಳ್ಳುವುದು ಅಮಿತ್ ಶಾ ಅವರ ಯೋಜನೆಗಳಲ್ಲಿ ಒಂದಾಗಿದೆ.
2014ರಲ್ಲಿ ಕೌಟುಂಬಿಕ ಕಲಹದ ಕಾರಣ ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ ಅಳಗಿರಿ ಅವರನ್ನು ಡಿಎಂಕೆಯಿಂದ ಹೊರಹಾಕಲಾಗಿತ್ತು. ಅಂದಿನಿಂದ ರಾಜಕೀಯ ನೆಲೆ ಕಂಡುಕೊಳ್ಳಲು ಅಳಗಿರಿ ಪ್ರಯತ್ನ ನಡೆಸುತ್ತಲೇ ಬಂದಿದ್ದಾರೆ. ತಮಿಳುನಾಡು ರಾಜಕಾರಣದ ಮೇಲೆ ತಮ್ಮ ಹಿಡಿತ ಸಾಧಿಸಲು ಎಂ.ಕೆ ಅಳಗಿರಿ ಹೊಸ ಪಕ್ಷ ಸ್ಥಾಪಿಸಿದ ಅದಕ್ಕೆ ಕಲೈನರ್ ಡಿಎಂಕೆ ಅಥವಾ ಕೆಡಿಎಂ ಎಂದು ಹೆಸರಿಡುವ ಸಾಧ್ಯತೆ ಇದೆ.


ಹೀಗಾಗಿ ಕರುಣಾನಿಧಿ ಅವರ ಪುತ್ರ ಅಳಗಿರಿ ಅವರನ್ನು ಭೇಟಿ ಮಾಡಲು ಅಮಿತ್ ಶಾ ಪ್ರಯತ್ನಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಂತ ಎಂ.ಕೆ. ಸ್ಟಾಲಿನ್ ಅವರನ್ನು ಬಿಜೆಪಿಗೆ ಬರ ಮಾಡಿಕೊಳ್ಳುತ್ತಾರೆ ಎಂದು ಅರ್ಥವಲ್ಲ. ಎಂ.ಕೆ. ಅಳಗಿರಿ ಅವರಿಗೆ ಹೊಸ ಪಕ್ಷ ಕಟ್ಟಲು ಹುಮ್ಮಸ್ಸು ತುಂಬುವುದು ಅಮಿತ್ ಶಾ ಲೆಕ್ಕಾಚಾರ ಎಂದು ಹೇಳಲಾಗುತ್ತಿದೆ.
ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯೇ ಇಲ್ಲದಿರುವುದರಿಂದ ಅಳಗಿರಿಯವರ ಹೊಸ ಪಕ್ಷದ ಆಶ್ರಯದಲ್ಲಿ ಬಿಜೆಪಿ ಬೇರು ಬಿಡುವಂತೆ ಮಾಡಬಹುದೆಂಬ ಲೆಕ್ಕಾಚಾರದೊಂದಿಗೆ ಈ ಕಸರತ್ತು ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಮತ್ತೊಂದೆಡೆ, ಸೂಪರ್ ಸ್ಟಾರ್ ತಲೈವಾ ರಜನಿಕಾಂತ್ ಅವರನ್ನೂ ಅಮಿತ್ ಶಾ ಭೇಟಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅಮಿತ್ ಶಾ ಅವರನ್ನು ರಜಿನಿಕಾಂತ್ ಭೇಟಿಯಾಗುತ್ತಿಲ್ಲ ಎಂದು ಆಪ್ತರು ಹೇಳಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: aiadmkamith shawbjp planDMKm.k alagiritamilnadu visit
ShareTweetSendShare
Join us on:

Related Posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

by Shwetha
April 28, 2026
0

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯು ಲಕ್ಷಾಂತರ ಕುಟುಂಬಗಳಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುತ್ತಿದೆ. ಆದರೆ...

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

by Shwetha
April 28, 2026
0

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ರಾಜ್ಯಸಭಾ ಅಧ್ಯಕ್ಷರು ಆಮ್ ಆದ್ಮಿ ಪಕ್ಷದ 7 ಸಂಸದರನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಅನುಮೋದನೆ ನೀಡಿದ್ದಾರೆ. ರಾಜ್ಯಸಭಾ ಸಚಿವಾಲಯ ಈ ಕುರಿತು...

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
April 28, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಈಗ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಒಂದಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಈಗ ರಾಜ್ಯಮಟ್ಟದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್...

ಸಚಿವ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಸಚಿವ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

by Shwetha
April 28, 2026
0

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ವಿಚಾರಿಸಲು ಗೃಹ ಸಚಿವ ಜಿ. ಪರಮೇಶ್ವರ್ ಇಂದು ಭೇಟಿ ನೀಡಿದರು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram