ಮಂಡ್ಯ: ದಸರಾ ಮಹೋತ್ಸವದ ವೇಳೆ ಆನೆ ಬೆದರಿ ಓಡಿ ಹೋಗಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಈ ಘಟನೆ ಶ್ರೀರಂಗಪಟ್ಟಣ ಮಿನಿ ವಿಧಾನಸೌಧದ ಬಳಿ ನಡೆದಿದೆ. ಶ್ರೀರಂಗಪಟ್ಟಣ ದಸರಾ (Shrirangapattana Dasara) ಮಹೋತ್ಸವಕ್ಕೆ ಹಿರಣ್ಯ ಎಂಬ ಆನೆ ಕರೆತರಲಾಗಿತ್ತು. ಚಿತ್ರಾಲಂಕಾರದ ನಂತರ ಆನೆ ಬೆದರಿ ಓಡಿ ಹೋಗಿದೆ. ಆನೆಯ ರಂಪಾಟ ಕಂಡು ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಕೂಡಲೇ ಎಚ್ಚೆತ್ತ ಮಾವುತರು ಹಾಗೂ ಕಾವಾಡಿಗರು ಮುಂದಾಗುವ ಅನಾಹುತ ತಪ್ಪಿಸಿದ್ದಾರೆ.
ಶ್ರೀರಂಗಪಟ್ಟಣಕ್ಕೆ ಮಹೇಂದ್ರ, ಲಕ್ಷ್ಮೀ, ಹಿರಣ್ಯ ಎಂಬ 3 ಆನೆಗಳು ಗುರುವಾರ ಆಗಮಿಸಿವೆ. ಬನ್ನಿಮಂಟಪದಿಂದ ರಂಗನಾಥ ಮೈದಾನದವರೆಗೆ ಅಂಬಾರಿ ಜೊತೆ ಹಿರಣ್ಯ ಆನೆ ಹೆಜ್ಜೆ ಹಾಕಲಿದೆ. ಮಹೇಂದ್ರ ಆನೆ ಮರದ ಅಂಬಾರಿ ಹೊರಲಿದೆ. ಈ ಆನೆಗೆ ಕುಮ್ಕಿ ಆನೆಯಾಗಿ ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ಹೆಜ್ಜೆ ಹಾಕಲಿವೆ.
ಹಿಂದೆಯೂ ಇದೇ ರೀತಿ ಅವಘಡ ನಡೆದಿತ್ತು. ಆ ಸಂದರ್ಭದಲ್ಲಿ ಶ್ರೀರಂಗಪಟ್ಟಣ ದಸರಾದಲ್ಲಿ ಚಾಮುಂಡೇಶ್ವರಿ ಹೋತ್ತು ಸಾಗುತ್ತಿದ್ದ ಗೋಪಾಲಸ್ವಾಮಿ ಹೆಸರಿನ ಆನೆ ಪಟಾಕಿ, ವಾದ್ಯದ ಸದ್ದಿಗೆ ಬೆದರಿ ದಿಕ್ಕಾಪಾಲಾಗಿ ಓಡಿತ್ತು.








