ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ (Fire Crackers incident Attibele) ಪ್ರಕರಣಕ್ಕೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿ ಅಮಾನತು ಆದ ಅಧಿಕಾರಿಗಳು. ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1 ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದ್ದು, ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತಿನ ಬಗ್ಗೆ ಡಿಸಿ, ಎಸ್ಪಿಗೆ ಸಿಎಂ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲಿಯೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.