ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಜನ್ನಾಪುರ ಹತ್ತಿರ ನಡೆದಿದೆ. ರಂಜನ್ (38) ಸಾವನ್ನಪ್ಪಿದ ಚಾಲಕ ಎಂದು ಗುರುತಿಸಲಾಗಿದೆ. ಕಾರು ಪ್ರಪಾತಕ್ಕೆ ಬಿದ್ದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ತಡೆಗೋಡೆ ಇಲ್ಲದ ಹಿನ್ನೆಲೆಯಲ್ಲಿ ಕಾರು ಪ್ರಪಾತಕ್ಕೆ ಬಿದ್ದಿದೆ. ಕಾರು ಕಳಸ ಮಾರ್ಗದತ್ತ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.