ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜಧಾನಿಗೆ ಬಂದ ಅಂಗನವಾಡಿ ಕಾರ್ಯಕರ್ತೆಯರು
ಬೆಂಗಳೂರು : ಸಂಬಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ.
ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಈಗಾಗಲೇ ರಾಜಧಾನಿಗೆ ಆಗಮಿಸಿದ್ದು, ಪ್ರತಿಭಟನೆಯಲ್ಲಿ ಸುಮಾರು ಐದರಿಂದ ಹತ್ತು ಸಾವಿರ ಕಾರ್ಯಕರ್ತೆಯರು ಭಾಗಿಯಾಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಸುತ್ತಮುತ್ತನ ಭಾಗಗಳಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ.
ಪ್ರಮುಖ ಬೇಡಿಕೆಗಳು
* ಬಾಕಿ ಉಳಿಸಿಕೊಂಡಿರುವ ಸಂಬಳ ಕೂಡಲೇ ಬಿಡುಗಡೆ ಮಾಡಬೇಕು
* ಪ್ರತಿ ತಿಂಗಳು ಪೂರ್ಣ ಸಂಬಳ ನೀಡಬೇಕು
* ಪಿಂಚಣಿ ಯೋಜನೆಯನ್ನ ಜಾರಿಗೆ ತರಬೇಕು
* ಸೇವಾ ನಿರತ ಆಧಾರದಲ್ಲಿ ಗೌರವಧನ ನೀಡಬೇಕು
* ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಇಎಸ್ ಐ ಸೌಲಭ್ಯಗಳನ್ನ ಒದಗಿಸಿಕೊಟ್ಟಿಲ್ಲ
* ಎಲ್ ಕೆ ಜಿ ಹಾಗೂ ಯು.ಕೆ.ಜಿ ತರಗತಿಗಳನ್ನ ಅಂಗನವಾಡಿಗಳಲ್ಲೆ ಆರಂಭಿಸಬೇಕು
* ಮಿನಿ ಅಂಗನವಾಡಿಗಳನ್ನ ಉನ್ನತೀಕರಿಸುವ ಜೊತೆಗೆ ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನ ನೇಮಕಾತಿ ಮಾಡಬೇಕು
* ಬಿಎಲ್ ಓ ಜವಬ್ದಾರಿಯಿಂದ ಕಾರ್ಯರ್ತೆಯರಿಗೆ ಬಿಡುಗಡೆ ಸಿಗಬೇಕು
* ಕೊವೀಡ್ 19 ರ ಪರಿಹಾರವನ್ನ ನೀಡಬೇಕು