ನ್ಯಾಯಾಲಯದ ಸೂಚನೆ ಬಳಿಕ ದೆಹಲಿಯ ಲೋಹಿ ಎಸ್ಟೇಟ್ ನಲ್ಲಿನ ಸರ್ಕಾರಿ ಬಂಗಲೆ ಖಾಲಿ ಮಾಡಲು ನಿರ್ಧರಿಸಿರುವ ಪ್ರಿಯಾಂಕಾ ಗಾಂಧಿಯವರು, ಅವರ ಬಳಿಕ ಆ ಬಂಗಲೆಯಲ್ಲಿ ವಾಸ್ತವ್ಯ ಹೂಡಲಿರುವ ಬಿಜೆಪಿ ಮುಖಂಡ ಅನಿಲ್ ಬಲೂನಿ ಅವರನ್ನು ಬಂಗಲೆ ಖಾಲಿ ಮಾಡುವ ಮುನ್ನ ಚಹಾ ಕೂಟಕ್ಕೆ ಆಹ್ವಾನಿಸಿದ್ದರು. ಆದ್ರೆ ಅನಿಲ್ ಬಲೂನಿ ಅವರು ಆಹ್ವಾನವನ್ನು ತಿರಸ್ಕರಿಸಿದ್ದರು. ಆದರೆ ಚಹಾಕೂಟದ ಆಹ್ವಾನ ತಿರಸ್ಕರಿಸಿದ್ದ ಅನಿಲ್ ಬಲೂನಿ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನೇ ಭೋಜನ ಕೂಟಕ್ಕೆ ಆಹ್ವಾನಿಸಿದ್ದಾರೆ. ಅಲ್ಲದೇ ನೀವು ಆಯೋಜಿಸಿದ್ದ ಚಹಾ ಕೂಟಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೆ ನೀವು ಭೋಜನ ಕೂಟಕ್ಕೆ ಬರಬೇಕು. ನಿಮಾಗಾಗಿ ಉತ್ತರಖಂಡ್ ಶೈಲಿಯ ಎಲ್ಲಾ ಸಾಂಪ್ರದಾಯಿಕ ಆಹಾರ ವ್ಯವಸ್ತೆ ಮಾಡಿಸಲಾಗುತ್ತೆ ಎಂದು ತಿಳಿಸಿದ್ದಾರೆ.
2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ
ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...








