ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅನಿತಾ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೈತ್ರಿ ಸರ್ಕಾರದಲ್ಲಿ ಘೋಷಿಸಿದ ಸಾಲಮನ್ನಾ, ಬಡವರ ಬಂಧು ಯೋಜನೆಗಳ ಪ್ರಸ್ತಾಪ ಮಾಡದೇ ನನ್ನ ಪತಿ ಮೇಲೆ ದ್ವೇಷ ಸಾಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬಜೆಟ್ ನಲ್ಲಿ ನನಗೆ ಯಾವುದೇ ಒಳ್ಳೆಯ ಅಂಶ ಕಾಣಿಸಿಲ್ಲ ಎಂದ ಅನಿತಾ ಕುಮಾರಸ್ವಾಮಿ ಇದೊಂದು ನೀರಸ ಬಜೆಟ್ ಎಂದು ಟೀಕಿಸಿದರು.
ತನ್ನ ಪತಿ ಕುಮಾರಸ್ವಾಮಿಯವರು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ್ದ ರೈತರ ಸಾಲ ಮನ್ನಾ ಯೋಜನೆಯನ್ನು ಮುಂದುವರಿಸಿಕೊಂಡು ಹೋಗಬೇಕಿತ್ತು, ಬಡವರ ಬಂಧು ಯೋಜನೆಯನ್ನು ಕೈಬಿಡುವ ಮುನ್ಸೂಚನೆ ನೀಡಲಾಗಿದೆ. ಯಾವುದೇ ವರ್ಗಕ್ಕೂ ಆನುಕೂಲ ಆಗುವ ಲಕ್ಷಣಗಳು ಈ ಬಜೆಟ್ ನಲ್ಲಿ ಕಾಣುತ್ತಿಲ್ಲ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.
ಪ್ರಿಯಾಂಕ್ ಖರ್ಗೆ ಜೈಲಿಗೆ ಹೋಗುವುದು ಗ್ಯಾರಂಟಿ: ಶ್ರೀರಾಮುಲು ಸ್ಫೋಟಕ ಭವಿಷ್ಯ
ಬಳ್ಳಾರಿ: ಕೆಪಿಎಸ್ಸಿ ಹುದ್ದೆ ನೇಮಕಾತಿ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಶುರುವಾಗಿದೆ. ಈ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ...








