ಮೈಸೂರು: ಜಮೀನು ವಿಚಾರವಾಗಿ ತಮ್ಮನೇ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್. ಡಿ ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ.
ಹೈರಿಗೆ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಜಮೀನಿನ ವಿಚಾರಕ್ಕೆ ತಮ್ಮ ಗಂಗಾಧರ್ ಹಾಗೂ ಅಣ್ಣ ಮಾದೇಗೌಡ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ಮತ್ತೆ ಅಣ್ಣ-ತಮ್ಮ ಜಮೀನು ವಿಚಾರವಾಗಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ತಮ್ಮ ಗಂಗಾಧರ್, ಅಣ್ಣ ಮಾದೇಗೌಡನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕೊಲೆ ಪ್ರಕರಣ ದಾಖಲಿಸಿಕೊಂಡ ಹೆಚ್.ಡಿ ಕೋಟೆ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ನೇತೃತ್ವದಲ್ಲಿ ಪೊಲೀಸರು, ತಲೆ ಮರೆಸಿಕೊಂಡಿದ್ದ ಆರೋಪಿ ಗಂಗಾಧರ್ನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ಸಿದ್ದರಾಮಯ್ಯರ ಕಷ್ಟದ ಸಂದರ್ಭದಲ್ಲಿ ಜೊತೆಗಿರಬೇಕು; ಕೆ.ಎಚ್. ಮುನಿಯಪ್ಪ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಯಾವಾಗಲೂ ಶೋಷಿತ ಸಮುದಾಯಗಳ ಪರ ನಿಂತಿದ್ದಾರೆ. ಅವರ (Siddaramaiah) ಕಷ್ಟದ ಸಮಯದಲ್ಲಿ ಶಾಸಕರು, ಸಚಿವರು, ಸಮುದಾಯಗಳು ಅವರ ಜೊತೆಗಿರಬೇಕು ಎಂದು ಸಚಿವ...