ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅವರನ್ನು ಪಾಕ್ ಏಜೆಂಟ್ ಎಂದು ಕರೆದು ಭಾರಿ ಟೀಕೆಗೆ ಒಳಗಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಸದನದಲ್ಲಿ ಸಂವಿಧಾನದ ಕುರಿತು ಚರ್ಚೆಗಳು ನಡೆಯುತ್ತಿದ್ದ ಈ ವೇಳೆ ಮಾತನಾಡಿದ ಅವರು, ಮಹಾಭಾರತವನ್ನು ಬರೆದಿದ್ದು ಕೀಳುಜಾತಿಯ ವಾಲ್ಮೀಕಿ ಎಂದರು. ತಮ್ಮ ಭಾಷಣದಲ್ಲಿ ಅಂಬೇಡ್ಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಯತ್ನಾಳ್, ಹಿಂದೂಗಳಿಗೆ ವೇದಗಳು ಬೇಕಾಗಿದ್ದವು. ಆಗ ಅವರು ವ್ಯಾಸನನ್ನು ಕರೆದರು. ಅವರಿಗೊಂದು ಮಹಾ ಕಾವ್ಯ ಮಹಾಭಾರತ ಬೇಕಾಗಿತ್ತು. ಆಗ ಅಸ್ಪೃಶ್ಯನಾದ ವಾಲ್ಮೀಕಿ ಬೇಕಾದ. ಇದೀಗ ಸಂವಿಧಾನದ ಅಗತ್ಯವಿದೆ ಅದಕ್ಕಾಗಿ ನನ್ನನ್ನು ಕರೆದರು ಎಂದು ಅಂಬೇಡ್ಕರ್ ಮಾತನ್ನು ಸದನದಲ್ಲಿ ತಪ್ಪಾಗಿ ಉಲ್ಲೇಖ ಮಾಡಿದರು.
ಯತ್ನಾಳ್ ಅವರ ತಪ್ಪನ್ನು ಗಮನಿಸಿದ ಇತರ ಸದಸ್ಯರು ಮಹಾಭಾರತವನ್ನು ಬರೆದಿದ್ದು ವ್ಯಾಸ ಮಹರ್ಷಿ ಹಾಗೂ ರಾಮಾಯಣ ಬರೆದಿದ್ದು ವಾಲ್ಮೀಕಿ ಎಂದು ತಪ್ಪನ್ನು ತಿದ್ದಿದ್ದರು.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








