ಹಾವೇರಿ: ನಿಂತಿದ್ದ ಕಾರಿಗೆ ಹಿಂದಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ (Byadagi) ತಾಲೂಕಿನ ಛತ್ರ ಗ್ರಾಮದ ಹತ್ತಿರ ನಡೆದಿದೆ. ಅಲ್ಲದೇ, ಈ ಘಟನೆಯಲ್ಲಿ 6 ಜನ ಗಾಯಗೊಂಡಿದ್ದಾರೆ. ನ್ಯೂ ಇಯರ್ ಪಾರ್ಟಿ ಮಾಡಲೆಂದು ಗೋವಾಗೆ ತೆರಳುತ್ತಿದ್ದ ಆಂಧ್ರ ಮೂಲದ ಯುವಕರ ತಂಡ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರ್ಘಟನೆ ನಡೆದಿದೆ.
ಗಂಭೀರವಾಗಿ ಗಾಯಗೊಂಡವರನ್ನು ದಾವಣಗೆರೆ ಮೂಲದ ತೇಜಸ್ (25), ಸಂದೇಶ್ (25), ದೀಪಕ್ (25) ಮತ್ತು ವೆಂಕಟೇಶ್ (26) ಎಂದು ಗುರುತಿಸಲಾಗಿದೆ. ವೀರೇಶ್ (23), ಲಕ್ಷ್ಮಣ (23), ಅಶೋಕ್ (24), ಗೌಡನಬಿ (24), ಸಾಗರ್ (26) ಮತ್ತು ಸಂಕೇತ್ (36) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...








