ವಿಜಯನಗರ : ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಚೈತ್ರಾ ಕುಂದಾಪುರ ಪ್ರಕರಣದ ರೀತಿಯಲ್ಲಿಯೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ.
ಹಗರಿಬೊಮ್ಮನಹಳ್ಳಿ ಟಿಕೆಟ್ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಕೋಟಿ ಕೋಟಿ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವೃತ್ತ ಇಂಜಿನಿಯರ್ ಶಿವಮೂರ್ತಿ ಎಂಬುವವರಿಗೆ 2 ಕೋಟಿ ರೂ. ವಂಚಿಸಿರುವ ಪ್ರಕರಣ ಬಯಲಿಗೆ ಬಂದಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಮುುಂದಾಗಿದ್ದ ಅವರಿಗೆ ಬಿಜೆಪಿ ಮುಖಂಡರ ಹೆಸರಿನಲ್ಲಿ ವಂಚಿಸಲಾಗಿದೆ. ಬಿಜೆಪಿ ಮಾಜಿ ನಾಯಕ, ಹಾಲಿ ಕೆಆರ್ ಪಿಪಿಯ ವಿಜಯನಗರ ಜಿಲ್ಲಾಧ್ಯಕ್ಷ ರೇವಣ್ಣ ಸಿದ್ದಪ್ಪ ಹಗರಿಬೊಮ್ಮನ ಟಿಕೆಟ್ ಕೊಡಿಸುವ ನೆಪದಲ್ಲಿ ಹಾಗೂ ಶೇಖರ್ ಎಂಬಾತ ಹಣ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ, ಈ ಟಿಕೆಟ್ ಚುನಾವಣೆ ಸಂದರ್ಭದಲ್ಲಿ ಬ್ಯಾಲ ಹುಣಸಿ ರಾಮಣ್ಣ ಅವರಿಗೆ ಸಿಗುತ್ತದೆ. ಆಗ ಕೋಪಗೊಂಡ ಶಿವಮೂರ್ತಿ ಹಣ ಮರಳಿ ಕೊಡುವಂತೆ ಕೇಳಿದ್ದಾರೆ. ಆಗ ವಾಗ್ವಾದ ನಡೆದಿದೆ. ಆದರೆ, ಮೂರು ತಿಂಗಳು ಕಳೆದರೂ ಹಣ ನೀಡಿಲ್ಲ. ಚೆಕ್ ಕೂಡ ಬೌನ್ಸ್ ಆಗಿವೆ. ಹೀಗಾಗಿ ಶಿವಮೂರ್ತಿ ಅವರು ಕೊಟ್ಟೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.