ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿರಿಬಾಗಿಲು ಪ್ರತಿಷ್ಠಾನ ಮತ್ತೊಂದು ಕೊಡುಗೆ “ಪಲಾಂಡು ಚರಿತ್ರೆ” ವಿಶಿಷ್ಟ ಯಕ್ಷಗಾನ ಪ್ರಸಂಗ

admin by admin
August 24, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಸಿರಿಬಾಗಿಲು ವೆಂಕಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಅಧ್ಯಯನ ಯೋಗ್ಯ ಕಾರ್ಯಕ್ರಮಗಳ ಜತೆ, ಕೊರೊನಾ ಯಕ್ಷ ಜಾಗೃತಿ ಮೂಲಕ ಜಾಗತಿಕ ಮಟ್ಟದಲ್ಲಿ ಕೊವಿಡ್ 19 ರ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಅದರ ಜತೆ ಇಂದಿನ ವಿದ್ಯಾಮಾನಕ್ಕೆ ಸರಿಹೊಂದುವ ರೀತಿ ಅಂದಾಜು 100 ವರ್ಷಗಳ ಹಳೆಯ ಪ್ರಸಂಗ ಕೆರೋಡಿ ಸಬ್ಬರಾವ್ ವಿರಚಿತ ಪಲಾಂಡು ಚರಿತ್ರೆ ಯಕ್ಷಗಾನವನ್ನು ಸಾಮಾಜಿಕ ಜಾಲತಾಣ ದಲ್ಲಿ ( YouTube SV Vision) ಪ್ರಸಾರ ಪಡಿಸಿದೆ.

“ಪಲಾಂಡು ಚರಿತ್ರೆ” ಎಂಬ ವಿಶೇಷ ಅಸಾಮಾನ್ಯ ಪ್ರಸಂಗದ ಕುರಿತು:

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

(ಕಂದಮೂಲ ಗಳಿಗೂ, ಶಾಖಾಹಾರಿಗಳಿಗೆ) ಸಸ್ಯ ಮೂಲ ತರಕಾರಿ ಮತ್ತು ಹಣ್ಣುಗಳಿಗೂ ತಮ್ಮಲ್ಲಿ ಯಾರು ಶ್ರೇಷ್ಠರೆಂಬ ಕುರಿತು ಉಂಟಾದ ವಾದ-ವಿವಾದ- ಕಾದಾಟ ಕೊನೆಗೆ ತೀರ್ಮಾನಕ್ಕೆ ಶ್ರೀಕೃಷ್ಣನಲ್ಲಿ ಮೊರೆ ಇಡಲಾಗುತ್ತದೆ. ಇತ್ತಂಡದವರಿಗೂ ಮೂರು ದಿನಗಳ ಅವಧಿ ಕೊಟ್ಟು ಅಭಿವೃದ್ಧಿ ಪಥದಲ್ಲಿದ್ದ ಕಂದಮೂಲಗಳು ಶ್ರೇಷ್ಠವೆಂದು ಪ್ರತಿಯೊಂದರ ವೈಶಿಷ್ಟ್ಯ ತಿಳುಹಿ, ಭೂಮಿಯಲ್ಲಿ ಬೇರು ಬಿಟ್ಟು ಕಷ್ಟ ಸಹಿಷ್ಣು ಗಳಾಗಿ ಗಟ್ಟಿಯಾಗಿ ಪರಿಸ್ಥಿತಿಗೆ ಹೊಂದಿ ಧೃತಿಗೆಡದೆ ಬಾಳುವುದೇ ನಿಜವಾದ ಬದುಕು. ಕೃಷಿ ಸಂಬಂಧಿತ ಯಾವ ಫಲ ಕಂದಮೂಲಗಳನ್ನು ಮನುಷ್ಯರು ಶರೀರದ ರೋಗನಿರೋಧಕ- ಪೌಷ್ಟಿಕಾಂಶ ಕ್ಕಾಗಿ ಹೇಗೆ- ಯಾವಾಗ ಬಳಸಬೇಕು – ಯಾವುದನ್ನು ಬಳಸಬಾರದು ಎಂಬ ಪ್ರಮುಖ ಸಂದೇಶ ಸಾರುವುದು ಈ ಪ್ರಸಂಗದ ಧ್ವನಿ.

ಪಲಾಂಡು ಚರಿತ್ರೆ, ಕೇವಲ ಪೌರಾಣಿಕ ಅಥವಾ ಕಾಲ್ಪನಿಕ ಕಥೆಗಳಿವೆ ಸೀಮಿತವಾಗಿದ್ದ ಯಕ್ಷಗಾನದ ವಸ್ತು ವಲಯವನ್ನು ವಿಸ್ತರಿಸಿ, ಸಾಮಾಜಿಕ ಹಾಗು ಸಮಕಾಲೀನ ಸಮಸ್ಯೆಗಳನ್ನು ಯಕ್ಷಗಾನೀಯವಾಗಿ ನಿರೂಪಿಸುವ ಮಾರ್ಗವನ್ನು ತೆರೆದು ತೋರಿದ ಶ್ರೇಯಸ್ಸು ಅದಕ್ಕಿದೆ. ಅದರ ಮಾದರಿಯನ್ನು ಅನುಸರಿಸಿ ಯಕ್ಷಗಾನೀಯ ಕವಿಗಳು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಸಮಕಾಲೀನ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಇಂತಹ ಕೃತಿಯನ್ನು ಈ ಕಾಲಕ್ಕೆ ತಕ್ಕಂತೆ ಪ್ರದರ್ಶಿಸಲು ಸಿರಿಬಾಗಿಲು ಪ್ರತಿಷ್ಠಾನವು ನೇತೃತ್ವ ವಹಿಸಿರುವುದು ಗಮನಿಸಬೇಕಾದ ಸಂಗತಿ.

ಕೊರೋನಾ ದಿಗ್ಬಂಧನದ ವೇಳೆಯಲ್ಲಿ ಯಕ್ಷಗಾನ ಪ್ರದರ್ಶನವಿಲ್ಲದೆ ನಿರುತ್ಸಾಹದಿಂದಿರುವ ಕಲಾವಿದರಿಗೆ
ಇಂತಹ ಪ್ರದರ್ಶನಗಳು ಅನುಕೂಲವಾಗಲಿದೆ. ಸಮಾಜಕ್ಕೆ ಉತ್ತಮ ಸಂದೇಶಗಳನ್ನು ಸಾರುವ ಇಂತಹ ಪ್ರಸಂಗಗಳು ಯಕ್ಷಗಾನ ಕಲಾಪ್ರೇಮಿಗಳು ಆಸ್ವಾದಿಸಲು-ಸಮಾಜ ಜಾಗೃತಿ ವಹಿಸಲು ಅನುಕೂಲವಾಗಲಿ, ಯಕ್ಷಗಾನ ಬೆಳಗಿ ಬರಲಿ ಎನ್ನುವುದು ಆಯೋಜಕರ ಅಂಬೋಣ.

“ಯಕ್ಷಗಾನ ಕಲೆಯನ್ನು ಸರ್ವಸ್ವವಾಗಿರಿಸುವ ಕಲಾವಿದರುಗಳಾದ ನಾವುಗಳು ಸಮಾಜಕ್ಕೆ ನಮ್ಮಿಂದ ಕಲೆಯ ಮೂಲಕವೇ ಏನಾದರೂ ಸಂದೇಶ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊಡಬೇಕೆಂಬುದು ನಮ್ಮ ಪ್ರಧಾನ ಉದ್ದೇಶ. ಈ ಹಿಂದೆ ಕೋವಿಡ್ 19 ರ ಬಗ್ಗೆ ಹಲವಾರು ಜಾಗೃತಿ ಯಕ್ಷಗಾನ , ಬೊಂಬೆಯಾಟ ನಡೆಸಿ ಜಾಗತಿಕ ಮಟ್ಟದಲ್ಲಿ ಜಾಗೃತಿ ಅಭಿಯಾನದಲ್ಲಿ ಪ್ರಧಾನ ಪಾತ್ರ ವಹಿಸಿದ್ದೇವೆ. ನೂರು ವರ್ಷಗಳ ಹಿಂದೆ ಕೆರೊಡಿ ಸುಬ್ಬರಾವ್ ರಚಿಸಿದ ಪಾಲಾಂಡು ಚರಿತ್ರೆ ಪ್ರಸಂಗದ ವಿಶೇಷತೆಯನ್ನು ಗಮನಿಸಿ, ಇಂದಿನ ಈ ಪರಿಸ್ಥಿತಿಗೆ ಹೊಂದುವಂತೆ ದಾಖಲಿಸಿ, ದೃಶ್ಯ ಮಾಧ್ಯಮದ ಮೂಲಕ ಪ್ರಸಾರ ಪಡಿಸುತ್ತಿದ್ದೇವೆ. ಯಕ್ಷಗಾನ ಕಲಾಪ್ರೇಮಿಗಳು ಇದನ್ನು ಆಸ್ವಾದಿಸಲಿ, ಆ ಮೂಲಕ ಯಕ್ಷಗಾನ ಕಲೆ ಬೆಳೆದು ಬರಲಿ ಇದು ನಮ್ಮ ಉದ್ದೇಶ” ಎಂದು ಸಿರಿಬಾಗಿಲು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣ ಮಯ್ಯ ತಿಳಿಸಿದರು.

ಈ ಪಾಲಾಂಡು ಚರಿತ್ರೆಯ ಕವಿ ಸಾಹಿತಿ ಕೆರೋಡಿ ಸುಬ್ಬರಾವ್ ರವರು ಪತ್ರಿಕೋದ್ಯಮಿ -ನಾಟಕ-ಕಾವ್ಯ-ಯಕ್ಷಗಾನ- ಲಲಿತ ಪ್ರಬಂಧ- ಭಾಷಾಂತರ ಎಲ್ಲಾ ಪ್ರಾಕಾರಗಳಲ್ಲೂ ವಿಫುಲ ಸಾಹಿತ್ಯ ರಚಿಸಿದ, ನಿಜ ಜೀವನದಲ್ಲಿ ಪ್ರಯೋಗಶೀಲ ಕೃಷಿಕರಾಗಿದ್ದರು.
ಇನ್ನು ಈ ಪ್ರಸಂಗದ ಚಿತ್ರೀಕರಣಕ್ಕೆ ಪ್ರಾಯೋಜಕತ್ವ ನೀಡಿದವರು ಹೈದ್ರಾಬಾದ್ ನ ಕನ್ನಡ ನಾಟ್ಯ ರಂಗದವರು. ಈ ಕನ್ನಡ ನಾಟ್ಯ ರಂಗವು ಹೊರನಾಡಿನ ಪ್ರಮುಖ ಕನ್ನಡ ಸಂಘಗಳಲ್ಲೊಂದು. 52 ವರ್ಷಗಳ ತನ್ನ ಭವ್ಯ ಇತಿಹಾಸದಲ್ಲಿ 100 ಯಕ್ಷಗಾನ ಸೇರಿ, 350ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕನ್ನಡ- ಸಂಸ್ಕೃತಿಯ ಪರಂಪರೆಯನ್ನು ಜೀವಂತವಾಗಿಡಲು ಶ್ರಮಿಸುತ್ತಾ ಬಂದಿರುವ ಸಂಸ್ಥೆಯ ಸ್ಥಾಪಕರು ಕೆರೋಡಿ ಗುಂಡೂರಾಯರು( ಸುಬ್ಬರಾಯರ ಮೊಮ್ಮಗ). ಪ್ರಸ್ತುತ ಉದ್ಯಮಿ, ಕಲಾ ಪೋಷಕರಾದ ,ಮಾರಣಕಟ್ಟೆ ಕೃಷ್ಣಮೂರ್ತಿಯವರು ಅಧ್ಯಕ್ಷರಾಗಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದೊಂದಿಗೆ, ಆಸಕ್ತರಿಗೆ ತರಬೇತಿ ನಡೆಸಿ, ತೆಲಂಗಾಣದಲ್ಲಿ ಪ್ರಥಮ ಬಾರಿಗೆ ಎಂಬ ಯಕ್ಷ- ನಾಟ್ಯ -ರಂಗ ವೆಂಬ ತಂಡವನ್ನು ಕಟ್ಟಿ, ಕುಶ-ಲವ ಆಖ್ಯಾನವನ್ನು ಪ್ರದರ್ಶಿಸಿದೆ.

ಕನ್ನಡ ನಾಟ್ಯ ರಂಗದ ನಿರಂಜನ ರಾವ್ ಅವರ ಅಪೇಕ್ಷೆಯಂತೆ ,ರಂಗವೂ ಈ ಸಂದಿಗ್ಧ ಕಾಲಘಟ್ಟದಲ್ಲಿ ಕಲಾವಿದರಿಗೆ ಸಹಕಾರಿಯಾಗುವ ದೃಷ್ಟಿಯಿಂದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಈ ಕಾರ್ಯಕ್ರಮಕ್ಕೆ ಪ್ರಾಯೋಜಕತ್ವ ನೀಡಿ ಸಹಕರಿಸಿದೆ.

ಪಲಾಂಡು ಚರಿತ್ರೆಯಲ್ಲಿ ವಾಸುದೇವ ರಂಗಭಟ್ ಮಧೂರು -ಶ್ರೀಕೃಷ್ಣನಾಗಿ ,ರಾಧಾಕೃಷ್ಣ ನಾವಡ ಮಧೂರು- ಚೂತ ಫಲವಾಗಿ ,ಜಯಪ್ರಕಾಶ್ ಶೆಟ್ಟಿ ಪರ್ಮುದೆ- ಪಲಾಂಡುವಾಗಿ ,ಮವ್ವಾರು ಬಾಲಕೃಷ್ಣ ಮಣಿಯಾಣಿ, ಹರೀಶ ಶೆಟ್ಟಿ ಮಣ್ಣಾಪು , ಮಾಧವ ಪಾಟಾಳಿ, ಪ್ರಕಾಶ್ ನಾಯಕ್, ಬಾಲಕೃಷ್ಣ ಸೀತಾಂಗೋಳಿ ,ಶಿವರಾಜ ಪೆರ್ಲ, ಶಿವಾನಂದ ಪೆರ್ಲ, ಕಿಶನ್, ಉಪಾಸನಾ, ಸ್ವಸ್ತಿಕ್, ಶ್ರೀಗಿರಿ ಮೊದಲಾದವರು ಪಾತ್ರ ನಿರ್ವಹಿಸಿದರು. ಹಿಮ್ಮೇಳದಲ್ಲಿ ಭಾಗವತರಾಗಿ -ರಾಮಕೃಷ್ಣ ಮಯ್ಯ ಸಿರಿಬಾಗಿಲು, ತಲ್ಪಣಾಜೆ ವೆಂಕಟ್ರಮಣ ಭಟ್, ಚೆಂಡೆ- ಮದ್ದಳೆಯಲ್ಲಿ ಲಕ್ಷ್ಮೀನಾರಾಯಣ ರಾವ್ ಅಡೂರು, ಲಕ್ಷ್ಮೀಶ ಬೆಂಗ್ರೊಡಿ ಭಾಗವಹಿಸಿದರು. ಬ್ರಹ್ಮಶ್ರೀ ಗಣಾದಿರಾಜ ತಂತ್ರಿ ಕೊಲ್ಲಂಗಾನ ಇವರು ವೇಷಭೂಷಣಗಳನ್ನಿತ್ತು ಸಹಕಸಿದರು. ಉದಯ ಕಂಬಾರ್ ವರ್ಣಾ ಸ್ಟುಡಿಯೋ ನೀರ್ಚಾಲು, ಹಾಗೂ ಶ್ರೀವತ್ಸ ಕುಂಚಿನಡ್ಕ ಇವರು ಚಿತ್ರೀಕರಿಸಿದರು.ಕೊಲ್ಲಂಗಾನ ಶ್ರೀನಿಲಯದಲ್ಲಿ ಚಿತ್ರೀಕರಣ ನಡೆಸಲಾಯಿತು.

-ಮಾಹಿತಿ ಮತ್ತು ನಿರೂಪಣೆ:- ಅಂಬಿಕಾ ಸೀತೂರು ಹಾಗೂ ಸಿರಿಬಾಗಿಲು ರಾಮಕೃಷ್ಣ ಮಯ್ಯ

Tags: #Saaksha TVSiribagilu FoundationYakshagana
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram