ಡಾ. ರಾಜ್ ಕುಮಾರ್ ಕುಟುಂಬದ ಮತ್ತೊಂದು ಕುಡಿ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟಿದೆ.
ಡಾ. ರಾಜ್ ಅವರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್ ಸಿನಿಮಾ ರಂಗ ಪ್ರವೇಶಿಸಿದ್ದಾರೆ. ಮಿಂಚುಹುಳು (Mincuhulu) ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಹೇಶ್ ಕುಮಾರ್ ಅವರ ಕಥೆ, ಚಿತ್ರಕಥೆ, ನಿರ್ದೇಶನವಿರುವ ಈ ಚಿತ್ರಕ್ಕೆ ಭೂನಿ ಪಿಕ್ಚರ್ಸ್ ಅಡಿ ರಾಜಗೋಪಾಲ್ ದೊಡ್ಡಹುಲ್ಲೂರು ಬಂಡವಾಳ ಹಾಕಿದ್ದಾರೆ.
ಇತ್ತೀಚೆಗೆ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆದ ಚಿತ್ರದ ವಿಶೇಷ ಪ್ರದರ್ಶನದಲ್ಲಿ ನಾದಬ್ರಹ್ಮ ಹಂಸಲೇಖಾ, ಹಿರಿಯನಟಿ ಜಯಮಾಲಾ, ನಿರ್ದೇಶಕ ಪಿ.ಶೇಷಾದ್ರಿ, ಲಹರಿ ವೇಲು, ಶಾಸಕ ಶರತ್ ಬಚ್ಚೇಗೌಡ, ಚಿಂತಕ ಪ್ರೊ. ರಾಜಪ್ಪ ದಳವಾಯಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡು ಚಿತ್ರದ ಬಗ್ಗೆ ಪ್ರಶಂಸೆಯ ಮಾತು ಹೇಳಿದ್ದರು.
ನಗರ ಪ್ರದೇಶದಲ್ಲಿ ನಡೆಯುವ ಕಥೆ ಇದಾಗಿದ್ದು, ಬೇವಬ್ದಾರಿ ತಂದೆ ಹಾಗೂ ಮಗನ ನಡುವಿನ ಕಥೆ ಇದಾಗಿದ್ದು, ಆ ತಂದೆಯ ಬದುಕಿನ ಬದುಕಿನ ವೈರುದ್ಯ, ಅಪ್ಪ- ಮಕ್ಕಳು ಬಾಡಿಗೆ ಕಟ್ಟಲಾಗದೆ ಪಾಳು ಮನೆ ಸೇರಿದಾಗ, ಆ ಮನೆಯಲ್ಲಿ ವಿದ್ಯುತ್ ಇರುವುದಿಲ್ಲ. ಏನಾದರೂ ಮಾಡಿ ವಿದ್ಯುತ್ ಹಾಕಿಸಬೇಕೆಂದು, ಪೇಪರ್ ಏಜೆಂಟ್ ಸಹಾಯದಿಂದ ಕರೆಂಟ್ ಹಾಕಿಸಲು ಮುಂದಾಗುತ್ತಾನೆ.
ಆದರೆ ಒಮ್ಮೆ ಆತ ಕೂಡಿಟ್ಟ ಹಣವನ್ನು ಇಲಿಯೊಂದು ಕಚ್ಚಿ ಹಾಕುತ್ತದೆ. ಮಿಂಚು ಹುಳುವೊಂದನ್ನು ನೋಡಿದ ಆ ಹುಡುಗನಿಗೆ ಹೊಸ ಆಲೋಚನೆ ಬಂದು, ವಿದ್ಯಾರ್ಥಿಯ ಬದುಕಿನಲ್ಲಿ ಹೊಸದಾರಿಗೆ ಅವಕಾಶ ಸಿಗುತ್ತದೆ. ಇದೇ ಚಿತ್ರದ ತಿರುಳಾಗಿದೆ. ಸದ್ಯ ಅಣ್ಣಾವ್ರ ಕುಟುಂಬದ ಮತ್ತೊಂದು ಕುಡಿ ಸಿನಿ ರಂಗ ಪ್ರವೇಶಿಸುತ್ತಿರುವುದಕ್ಕೆ ಅಭಿಮಾನಿಗಳು ಖುಷಿ ವ್ಯಕ್ತಪಡಿಸಿದ್ದಾರೆ.