ಚಿಕ್ಕಮಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರು ಬಿಗ್ ಮನೆಯಿಂದಲೇ ಪೊಲೀಸರ ಅತಿಥಿಯಾಗಿದ್ದರು. ಏಕೆಂದರೆ ಅವರು ಹುಲಿಯ ಉಗುರು ಧರಿಸಿದ್ದಕ್ಕೆ ಅರೆಸ್ಟ್ ಆಗಿದ್ದರು. ಸದ್ಯ ಅಂಥದ್ದೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಮೂಡಿಗೆರೆ ಅರಣ್ಯ ಇಲಾಖೆ ಸಿಬ್ಬಂದಿಯು ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಜಿಲ್ಲೆಯ ಭಾರತಿಬೈಲು ಬಳಿಯ ಕುಂಡ್ರ ಗ್ರಾಮದ ನಿವಾಸಿ ಸತೀಶ್ ಹಾಗೂ ಹಲ್ಲೇಮನೆ ಕುಂದೂರು ನಿವಾಸಿ ಕೆ.ಎಸ್.ರಂಜಿತ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.