ಅಮರಾವತಿ: ತಿರುಪತಿ (Tirupati) ಸನ್ನಿಧಿಯಲ್ಲಿ ಕಾಲ್ತುಳಿತ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.
ಅತಿಥಿ ಗೃಹದಲ್ಲಿ 1ನೇ ಮಹಡಿಯಿಂದ ಬಾಲಕ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಸೌಲಭ್ಯದ ಮೊದಲ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೂರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಗುರುವಾರ ಸಂಜೆ ನಿಗದಿಯಾಗಿದ್ದ, ದೇವರ ದರ್ಶನಕ್ಕಾಗಿ ಕಡಪ ಜಿಲ್ಲೆಯ ಚಿನ್ನ ಚೌ ಗ್ರಾಮದಿಂದ ಕುಟುಂಬ ತೆರಳಿತ್ತು. ಮಧ್ಯಾಹ್ನ 3:30 ರ ಸುಮಾರಿಗೆ ತನ್ನ ಸಹೋದರನೊಂದಿಗೆ ಬಾಲಕ ಆಟವಾಡುತ್ತ ಮೇಲಿಂದ ಕಾಲು ಜಾರಿ ಬಿದ್ದಿದ್ದಾನೆ. ಸದ್ಯ ಈ ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ಘಟನೆ ನಡೆದಿದೆ. ಇಂತಹ ಪ್ರಕರಣಗಳು ನಡೆಯುತ್ತಿರುವುದಕ್ಕೆ ಆತಂಕ ವ್ಯಕ್ತವಾಗುತ್ತಿದೆ.