ದೇಶಾದ್ಯಂತ ಸಿಎಎ ಪರ ಮತ್ತು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ . ಈಗಾಗಲೇ ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಸೂದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಸ್ವಲ್ಪ ದಿನಕ್ಕೆ ತಣ್ಣಗಾದ ಹಿಂಸಾಚಾರ ಉತ್ತರ ಪ್ರದೇಶದಲ್ಲಿ ಮತ್ತೆ ಪುನರಾವರ್ತನೆ ಆಗುವ ಲಕ್ಷಣಗಳು ಕಾಣುತ್ತಿದೆ. ಇದೀಗ ಉತ್ತರ ಪ್ರದೇಶದ ಅಲಿಘರ್ನಲ್ಲಿ ಪೊಲೀಸರು ಪ್ರತಿಭಟನಾಕಾರರಿಗೆ ಪ್ರತಿಭಟನಾ ಸ್ಥಳದಲ್ಲಿ ಪೆಂಡಾಲ್ ಹಾಕಲು ಅನುಮತಿ ನೀಡದನ್ನು ಪ್ರಶ್ನಿಸಿ ಏಕಾಏಕಿ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದು, ಸ್ಥಳಕ್ಕೆ ಆಗಮಿಸಿದ ರಾಪಿಡ್ ಆಕ್ಷನ್ ಫೋರ್ಸ್ ಪರಿಸ್ಥಿತಿಯನ್ನು ಹತೊಟ್ಟಿಗೆ ತಂದಿದೆ. ಘಟನೆಯಲ್ಲಿ ಕೆಲ ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪೊಲೀಸ್ ವಾಹನಗಳು ಜಖಂ ಗೊಂಡಿವೆಯೆಂದು ವರದಿಯಾಗಿದೆ .
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...








