ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅನುಭವ ಮಂಟಪವು ಮಾನವ ನಿರ್ಮಾಣ ಕಾರ್ಯ: ಸಾಹಿತಿ ಗೋರೂಚ ಬಣ್ಣನೆ

Kariyappa N by Kariyappa N
January 6, 2021
in Newsbeat, Politics, Samagra karnataka, ರಾಜ್ಯ
basava kalyana
Share on FacebookShare on TwitterShare on WhatsappShare on Telegram

ಬೀದರ್: ನೂತನ ಅನುಭವ ಮಂಟಪ ನಿರ್ಮಾಣ ಐತಿಹಾಸಿಕ ಪವಿತ್ರ ಕಾರ್ಯ. ಇದು ಕಟ್ಟಡ ನಿರ್ಮಾಣವಲ್ಲ, ಇದು ಮಾನವ ನಿರ್ಮಾಣ ಕಾರ್ಯ ಎಂದು ಸಾಹಿತಿ ಗೋ.ರು.ಚನ್ನಬಸಪ್ಪ ಬಣ್ಣಿಸಿದ್ದಾರೆ.
ಬಸವಕಲ್ಯಾಣದಲ್ಲಿ ನಡೆದ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿಪೂಜೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಗೋರುಚ, ನಾಡಿನ ಲಕ್ಷ ಲಕ್ಷ ಜನರು ಬಹುದಿನಗಳಿಂದ ನಿರೀಕ್ಷೆ ಇಟ್ಟುಕೊಂಡ ಕಾರ್ಯವು ಇಂದು ನಡೆದಿದೆ. ಕೆಲವು ವರ್ಷಗಳಿಂದ ವಿಳಂಭವಾಗಿದ್ದ ಈ ಅನುಭವ ಮಂಟಪ ನಿರ್ಮಾಣ ಕಾರ್ಯಕ್ಕೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾದ ಮೊದಲ ತಿಂಗಳಲ್ಲೇ ಘೋಷಣೆ ಮಾಡಿದ್ದಕ್ಕೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

basava
ಅನುಭವ ಮಂಟಪ ನಿರ್ಮಾಣ ಸಮಿತಿಯ ವರದಿ ಮಾಡುವಾಗ ನಾಡಿನ ಅನೇಕ ಸಾಹಿತಿಗಳು, ಚಿಂತಕರು, ಎಲ್ಲ ಭಾಷಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ನೀಡಿದ ಸಹಕಾರವನ್ನು ನಾವು ಸ್ಮರಿಸಲೇಬೇಕು ಎಂದು ತಿಳಿಸಿದರು.
ಬಸವಣ್ಣನವರ ಕಾಲದಲ್ಲಿ ಇದ್ದ ಸಾಮಾಜಿಕ ಮತ್ತು ಧಾರ್ಮಿಕ ಅಸಮಾನತೆಯ ವಿರುದ್ಧದ ಹೊರಾಟಕ್ಕೆ ಈ ಅನುಭವ ಮಂಟಪವು ತಳಹದಿಯಾಗಿತ್ತು. ರಾಜಕೀಯ ಧಾರ್ಮಿಕ ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಸಾಕಷ್ಟು ಸುಧಾರಣೆ ಮಾಡಿದ, ಪ್ರಜೆಗಳನ್ನು ಒಳ್ಳೆಯವರನ್ನಾಗಿ ಮಾಡುವ ಕಾರ್ಯವನ್ನು ಅಂದು ಈ ಅನುಭವ ಮಂಟಪ ಮಾಡಿದೆ. ಯಾವುದೇ ಕ್ಷೇತ್ರದಲ್ಲಿನ ಆದೇಶ ನಿರೂಪಕರಿಗೆ, ಕಾರ್ಯ ನಿರ್ವಾಹಕರಿಗೆ ಸೂಕ್ತವಾದಂತಹ ಮಾರ್ಗದರ್ಶನ ನೀಡುವ ಕೇಂದ್ರ ಇದಾಗಬೇಕಿದೆ ಎಂದು ತಿಳಿಸಿದರು.
ಜಗತ್ತಿನ ಎಲ್ಲ ಚಿಂತಕರು ಇಲ್ಲಿ ಬರಬೇಕು. ಬೃಹತ್ ಶೈಕ್ಷಣಿಕ ಪ್ರವಾಸಿ ಕೇಂದ್ರ ಇದಾಗಬೇಕು. ನುಡಿದಂತೆ ನಡೆದಿರುವುದು ಶರಣ ಸಂಸ್ಕೃತಿಯಾಗಿದೆ. ಈ ತತ್ವವನ್ನು ನಾವು ಅರ್ಥ ಮಾಡಿಕೊಂಡರೆ ಇಡೀ ಜಗತ್ತೆ ಸರಿ ಇರುತ್ತದೆ. ತಮಗೆ ಮೋಜಿಗೆ ಬೇಕಾದಷ್ಟು ಹಣ ಕೊಡಲಿಲ್ಲ ಎಂದು ಒಬ್ಬ ಯುವಕ ತಂದೆತಾಯಿಯನ್ನು ಕೊಲ್ಲುವ ಕಾಲದಲ್ಲಿ ನಾವಿದ್ದೇವೆ. ಇಂತಹ ಮನೋಭಾವವು ನಮ್ಮ ಇಡೀ ವ್ಯವಸ್ಥೆಯಲ್ಲಿ ಉಳಿದಿದೆ. ಈ ವ್ಯವಸ್ಥೆ ಬದಲಾಗಬೇಕಿದೆ ಎಂದು ಗೋ.ರು ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

anubhava mandapa
ನನಗೂ ವಯಸ್ಸಾಗಿದೆ. ನಾನು ನೋಡಬಹುದೇ ಅನುಭವ ಮಂಟಪವನ್ನು ಎಂದು ಹೇಳಿದ ಗೋರೂಚ ಅವರು, ತಾವು ಸಲಹೆ ನೀಡಿದಂತೆ ನಾಡಿನಲ್ಲಿ ಈಗಾಗಲೇ ಜಾನಪದ ವಿಶ್ವ ವಿದ್ಯಾಲಯ ಕಾರ್ಯಾರಂಭಗೊಂಡಂತೆ ಅನುಭವ ಮಂಟಪ ನಿರ್ಮಾಣ ಕಾರ್ಯ ಕೂಡ ಬೇಗನೆ ಆಗಬೇಕು. ಇದನ್ನು ಸವಾಲಿನಂತೆ ಸ್ಚೀಕರಿಸಿ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಬೇಕು ಎಂದರು.
ಚಿಂತಕರಾದ ಬಸವರಾಜ ಪಾಟೀಲ ಸೆಡಂ ಅವರು ಮಾತನಾಡಿ, ಎಲ್ಲರ ಸಹಕಾರ ಪಡೆದು ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೂ ಶ್ರಮಿಸುವುದಾಗಿ ತಿಳಿಸಿದರು.
ಅನುಭವ ಮಂಟಪದ ಅಧ್ಯಕ್ಷರಾದ ಭಾಲ್ಕಿಯ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ದೆಹಲಿಯಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಸಂಸತ್ ಭವನ ಉದ್ಘಾಟನೆ ವೇಳೆಯಲ್ಲಿ ಇಡೀ ಜಗತ್ತಿಗೆ ಸಂಸತ್ತು ನಿರ್ಮಾಣದ ಸಂದೇಶ ನೀಡಿದ ನೆಲ ಬಸವಕಲ್ಯಾಣ ಎಂದು ಹೇಳಿರುವುದು ಕಲ್ಯಾಣ ನಾಡಿನ ಮಹತ್ವವನ್ನು ತಿಳಿಸುತ್ತದೆ ಎಂದರು.
ಸಮಾರಂಭದಲ್ಲಿ ಹಾರಕೂಡ ಡಾ.ಚನ್ನವೀರ ಶಿವಾಚಾರ್ಯರು, ಶಿವಾನಂದ ಸ್ವಾಮೀಜಿ, ರಾಜೇಶ್ವರ ಶಿವಾಚಾರ್ಯರು, ಅಕ್ಕ ಅನ್ನ ಪೂರ್ಣತಾಯಿ, ಅಕ್ಕ ಗಂಗಂಬಿಕಾ ತಾಯಿ, ಸಿದ್ದರಾಮ ಶರಣರು, ಸಿದ್ದರಾಮೇಶ್ವರ ಸ್ವಾಮೀಜಿ, ಗುರುಬಸವಲಿಂಗ ಪಟ್ಟದ್ದೇವರು ಹಾಗೂ ಇನ್ನೀತರರು ಉಪಸ್ಥಿತರಿದ್ದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Anubhava mantapbasava kalyanaBasavannago.ru channabasappa
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram