ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತೀಯ ಕ್ರೀಡಾ ರಂಗದಲ್ಲಿ ಅನುರಾಗ ಅರಳೋ ಸಮಯ

admin by admin
July 8, 2021
in Newsbeat, Sports, ಕ್ರೀಡೆ
Anurag Thakur union sports minister saakshatv
Share on FacebookShare on TwitterShare on WhatsappShare on Telegram

ಭಾರತೀಯ ಕ್ರೀಡಾ ರಂಗದಲ್ಲಿ ಅನುರಾಗ ಅರಳೋ ಸಮಯ

Anurag Thakur union sports minister saakshatvಅನುರಾಗ್ ಠಾಕೂರ್….!
ಎಂಥವರನ್ನೂ ಒಂದು ಕ್ಷಣ ಸೂಜಿಗಲ್ಲಿನಂತೆ ಆಕರ್ಷಿಸುವ ಸುರದ್ರುಪಿ ಸುಂದರ . ಮಾತಿನಲ್ಲೇ ಮೋಡಿ ಮಾಡುವ ಮೋಡಿಗಾರ. ಕೆಲಸದಲ್ಲೂ ಅಷ್ಟೇ ಚತುರ. ಎಲ್ಲವನ್ನೂ ಕ್ಷಣ ಮಾತ್ರದಲ್ಲೇ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವ ಕಲೆಗಾರ. ಏಟಿಗೆ ಎದುರೇಟು ನೀಡುವ ಪಕ್ಕಾ ಲೆಕ್ಕಾಚಾರ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ಆಡಳಿತಗಾರ. ಹೀಗೆ ಎಲ್ಲವನ್ನು ಅರ್ಥ ಮಾಡಿಕೊಂಡು, ಸದಾ ಸುದ್ದಿಯಲ್ಲಿರುವ ಅನುರಾಗ್ ಠಾಕೂರ್ ಸೋಲಿಲ್ಲದ ಸರದಾರ.
ಪ್ರಧಾನಿ ಮೋದಿ ಸಂಪುಟದಲ್ಲಿ ರಾಜ್ಯ ಹಣಕಾಸು ಸಚಿವರಾಗಿದ್ದ ಅನುರಾಗ್ ಠಾಕೂರ್ ಅವರು ಈಗ ಕೇಂದ್ರ ಕ್ರೀಡಾ ಸಚಿವರಾಗಿದ್ದಾರೆ. ಹೆಚ್ಚುವರಿಯಾಗಿ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವರೂ ಹೌದು.
ಟೋಕಿಯೋ ಒಲಿಂಪಿಕ್ಸ್ ಗೆ ಕೇವಲ ಎರಡು ವಾರ ಬಾಕಿ ಇರುವಾಗಲೇ ಕಿರೇನ್ ರಿಜಿಜು ಅವರ ಸ್ಥಾನಕ್ಕೆ ಅನುರಾಗ್ ಠಾಕೂರ್ ನೇಮಕಗೊಂಡಿದ್ದಾರೆ.
ರಾಜಕಾರಣ ಜೊತೆ ಹಿಮಾಚಲ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ, ಆನಂತರ ಬಿಸಿಸಿಐ ಕಾರ್ಯದರ್ಶಿಯಾಗಿದ್ದರು. ಅಲ್ಲದೆ, ಜಗಮೋಹನ್ ದಾಲ್ಮಿಯಾ ನಿಧನರಾದ ನಂತರ ಅಂದ್ರೆ 2016ರಿಂದ 2017ರವರೆಗೆ ಅನುರಾಗ್ ಠಾಕೂರ್ ಅವರು ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಈ ಸಮಯದಲ್ಲಿ ಬಿಸಿಸಿಐನಲ್ಲಿ ಆಗಿರುವ ಕೆಲವೊಂದು ವಿವಾದಗಳಿಂದ ಸುಪ್ರೀಂ ಕೋರ್ಟ್ ಆದೇಶದಂತೆ ಅನುರಾಗ್ ಠಾಕೂರ್ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

Anurag Thakur union sports minister saakshatv26ರ ಹರೆಯದಲ್ಲೇ ಹಿಮಾಚಲ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷನಾಗಿ, ಪ್ರಥಮ ದರ್ಜೆಯ ಪಂದ್ಯಗಳಲ್ಲಿ ಕ್ರಿಕೆಟ್ ಆಟಗಾರನಾಗಿದ್ದರು. ಕ್ರಿಕೆಟ್ ಜೊತೆಯಲ್ಲಿ ರಾಜಕೀಯ ಅಖಾಡದಲ್ಲೂ ಅನುರಾಗ್ ಠಾಕೂರ್ ಯಶಸ್ಸಿ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ.
46ರ ಹರೆಯದ ಅನುರಾಗ್ ಠಾಕೂರ್ ಅವ್ರ ವೃತ್ತಿ ಬದುಕು ಟೆಸ್ಟ್, ಏಕದಿನ, ಟಿ-ಟ್ವೆಂಟಿ ಕ್ರಿಕೆಟ್ ಬೆಳೆದು ಬಂದಷ್ಟೇ ಸೊಗಸಾಗಿದೆ. .
ಯಾಕಂದ್ರೆ ಅನುರಾಗ್ ಠಾಕೂರ್ ಗೆ ನಾಯಕತ್ವದ ಗುಣ ಬಂದಿದ್ದು ರಕ್ತಗತವಾಗಿ. ಬುದ್ದಿಬರುವಾಗಲೇ ರಾಜಕೀಯ ಚದುರಂಗದ ಆಟಗಳನ್ನು ಹತ್ತಿರದಿಂದ ನೋಡುತ್ತ ಬೆಳೆಯುವ ಅವಕಾಶ ಸಿಕ್ಕಿತ್ತು. ತಂದೆಯ ಪ್ರಭಾವದಿಂದ ಶಾಲಾ ಕಾಲೇಜ್ ದಿನಗಳಲ್ಲಿ ಮುಂಚೂಣಿಯಲ್ಲಿದ್ರು. ಏಟಿಗೆ ಏಟು ಅನ್ನೋ ತತ್ವಗಳನ್ನು ಮೈಗೂಡಿಸಿಕೊಂಡ್ರು. ಮನೆಯಲ್ಲಿ ರಾಜಕೀಯ ಪ್ರಭಾವಿದ್ರೂ ಅನುರಾಗ್ ಠಾಕೂರ್ ಗೆ ಕ್ರಿಕೆಟ್ ಆಟದ ಮೇಲೆ ಸಾಕಷ್ಟು ಪ್ರೀತಿ. ಸ್ವತಃ ಕ್ರಿಕೆಟಿಗನಾಗಿರುವ ಅನುರಾಗ್ ಠಾಕೂರ್ ಹಿಮಾಚಲ ಕ್ರಿಕೆಟ್ ಸಂಸ್ಥೆಗೆ ಹೊಸ ಕಾಯಕಲ್ಪ ನೀಡಿದ್ದರು.
ಪರಿಣಾಮ, 2000ರಲ್ಲಿ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಪಟ್ಟ ತಾನಾಗಿಯೇ ಒಲಿದು ಬಂತು.
ಅಷ್ಟೇ ಅಲ್ಲ, ಅಧ್ಯಕ್ಷನಾಗಿ ಹಿಮಾಚಲ ಕ್ರಿಕೆಟ್ ತಂಡದ ನಾಯಕನಾಗಿ ತಂಡವನ್ನು ಕೂಡ ಮುನ್ನೆಡೆಸಿದ್ದರು. ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾ ಕ್ರೀಡಾಂಗಣ ನಿರ್ಮಿಸಲು ಅನುರಾಗ್ ಠಾಕೂರ್ ಅವರ ಶ್ರಮವೂ ಇದೆ.

Anurag Thakur union sports minister saakshatv34ರ ವಯಸ್ಸಿನಲ್ಲಿ ಸಂಸತ್ ಪ್ರವೇಶಿಸಿದ ರಾಜಕಾರಣಿ. ಹಿಮಾಚಲ ಪ್ರದೇಶದ ಹರ್ಮಿಪುರ ಲೋಕ ಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿ ಆಯ್ಕೆಯಾಗಿರುವ ಬಿಜೆಪಿ ಸಂಸದ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ನಂತರ ಅನುರಾಗ್ ಠಾಕೂರ್ ಅದೃಷ್ಟಕ್ಕೆ ಸಿಕ್ಕಿತ್ತು ಮತ್ತಷ್ಟು ಬಲ. ಅಲ್ಲದೆ 2019ರಲ್ಲಿ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಪದವಿಯನ್ನು ಕೂಡ ಅಲಂಕರಿಸಿದ್ದರು.
ನಂತರ ಬಿಸಿಸಿಐ ಅಖಾಡದಲ್ಲಿ ಟ್ವೆಂಟಿ ಟ್ವೆಂಟಿ ಆಟ ಶುರು ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಾಗೂ ಮಾಜಿ ಸಚಿವ ದಿವಗಂತ ಅರುಣ್ ಜೇಟ್ಲಿಯವರ ಗುರುಬಲದಿಂದ ಒಲಿದು ಬಂದಿತ್ತು ಬಿಸಿಸಿಐ ಕಾರ್ಯದರ್ಶಿ ಪಟ್ಟ.
ಆಗ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ತಂತ್ರಕ್ಕೆ ಪ್ರತಿ ತಂತ್ರ ರೂಪಿಸಿ ಜಯ ಸಾಧಿಸಿದ ಚಾಣಕ್ಯ. ಬಳಿಕ ನಡೆದಿದ್ದು ಎಲ್ಲವೂ ಅನುರಾಗದ ಅಲೆ.

ಅಂದ ಹಾಗೇ, ಅನುರಾಗ್ ಠಾಕೂರ್ ಗೆ ಬಿಸಿಸಿಐ ಕಾರ್ಯದರ್ಶಿ ಹುದ್ದೆ ಮುಳ್ಳಿನ ಹಾಸಿಗೆಯಂತಿತ್ತು. ಬಿಸಿಸಿಐ ಪದಾಧಿಕಾರಿ ಪಟ್ಟಿಯಲ್ಲಿ ಶ್ರೀನಿವಾಸನ್ ಬೆಂಬಲಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ರು. ಆದ್ರೂ ಚಾಣಕ್ಷ ನಡೆ ಪ್ರದರ್ಶಿಸಿದ ಅನುರಾಗ್ ಠಾಕೂರ್ ನಿಧಾನವಾಗಿ ಹಿಡಿತಕ್ಕೆ ತೆಗೆದುಕೊಂಡಿದ್ದರು. ತಂಡದ ಆಯ್ಕೆ ಸಭೆಯಿಂದ ಹಿಡಿದು ಬಿಸಿಸಿಐ, ಐಪಿಎಲ್ ಹೀಗೆ ಎಲ್ಲಾ ವಿಭಾಗದಲ್ಲೂ ಪ್ರಭಾವ ಬೀರತೊಡಗಿದ್ರು. ಅಷ್ಟೇ ಅಲ್ಲ ದಾಲ್ಮಿಯಾ ನಿಧನ ನಂತರ ಅನುರಾಗ್ ಠಾಕೂರ್ ಸುಲಭವಾಗಿಯೇ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಅನುರಾಗ್ ಠಾಕೂರ್ ಬಿಸಿಸಿಐ ಅಧ್ಯಕ್ಷರಾಗಿದ್ದಾಗ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಅದರಲ್ಲೂ ಮುಖ್ಯವಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸರಣಿ ನಡೆಸುವ ಬಗ್ಗೆ ಅನುರಾಗ್ ಠಾಕೂರ್ ಕಡ್ಡಿ ಮುರಿದಂತೆ ಹೇಳಿಕೆ ನೀಡಿ ಎಲ್ಲರನ್ನು ಅಚ್ಚರಿಗೊಳಿಸಿದ್ದರು. ಅಭದ್ರತೆಯ ನಡುವೆ ಕ್ರಿಕೆಟ್ ಸಂಬಂಧ ವೃದ್ದಿಸಲು ಸಾಧ್ಯವಿಲ್ಲ. ಕ್ರಿಕೆಟ್ ಗಿಂತಲೂ ದೇಶದ ಭದ್ರತೆ ಮುಖ್ಯ. ಹೀಗೆ ಯಾವುದೇ ಗೊಂದಲಗಳಿಲ್ಲದೆ ನೇರವಾಗಿಯೇ ಪಾಕ್ ಕ್ರಿಕೆಟ್ ಮಂಡಳಿ ಹಾಗೂ ಪಾಕಿಸ್ತಾನಕ್ಕೆ ಸಂದೇಶ ರವಾನಿಸಿದ್ದರು. ಮೇಲ್ನೋಟಕ್ಕೆ ಈ ಹೇಳಿಕೆ ರಾಜಕೀಯ ಪ್ರೇರಿತ ಅಂತ ಅನ್ನಿಸಿದ್ರೂ ಅನುರಾಗ್ ಹೇಳಿಕೆ ಅಷ್ಟೇ ಅರ್ಥಪೂರ್ಣವಾಗಿತ್ತು. ಕ್ರಿಕೆಟ್ ಗಿಂತಲೂ ದೇಶದ ಹಿತ ಮುಖ್ಯ. ಆಟಗಾರರ ಬೆವರಿನ ಹನಿಗಿಂತಲೂ ಭಾರತೀಯ ಯೋಧರ ರಕ್ತ ಮುಖ್ಯ ಎಂಬ ನೇರ ನುಡಿ ಅನುರಾಗ್ ಠಾಕೂರ್ ಹೇಳಿಕೆಯಲ್ಲಿತ್ತು.
Anurag Thakur union sports minister saakshatv virat kohliಕೇಂದ್ರ ಸರ್ಕಾರ ಹೇಳಬೇಕಾದ ಮಾತನ್ನು ಸ್ವತಃ ಅನುರಾಗ್ ಠಾಕೂರ್ ಅವ್ರೇ ಹೇಳಿ ಮುಗಿಸಿದ್ದರು.
ಇಂತಹ ನೇರ ನಡೆಯ ನುಡಿಯ ಅನುರಾಗ್ ಠಾಕೂರ್ ಗೆ ಈಗ ಭಾರತೀಯ ಕ್ರೀಡಾ ರಂಗಕ್ಕೆ ಹೊಸ ಕಾಯಕಲ್ಪ ನೀಡುವ ಸವಾಲು ಇದೆ. ಈ ಹಿಂದಿನ ಕ್ರೀಡಾ ಸಚಿವರುಗಳು ಏನು ಮಾಡಿದ್ದಾರೆ ಎಂಬುದು ಮುಖ್ಯವಲ್ಲ. ಮುಂದೆ ಏನು ಮಾಡಬೇಕು ಎಂಬುದು ಮುಖ್ಯ. ಭಾರತೀಯ ಕ್ರಿಕೆಟ್ ಯಶಸ್ಸಿನ ಉತ್ತುಂಗದಲ್ಲಿದೆ. ಬಿಸಿಸಿಐ ಕೂಡ ಶ್ರೀಮಂತವಾಗಿದೆ. ಆದ್ರೆ ಭಾರತದ ಬೇರೆ ಬೇರೆ ಕ್ರೀಡಾ ಸಂಸ್ಥೆಗಳು ದುಡ್ಡಿಲ್ಲದೆ ಪರದಾಡುತ್ತಿದೆ. ಸರ್ಕಾರದ ಸವಲತ್ತುಗಳು ಸೂಕ್ತ ರೀತಿಯಲ್ಲಿ ಕ್ರೀಡಾಪಟುಗಳಿಗೆ ಸಿಗುತ್ತಿಲ್ಲ. ಕ್ರೀಡಾಪಟುಗಳಿಗಿಂತ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು, ಕೋಚ್‍ಗಳಿಗೆ ಹೆಚ್ಚು ವ್ಯಯ ಮಾಡಲಾಗುತ್ತಿದೆ. ಇದೀಗ ಟೋಕಿಯೋ ಒಲಿಂಪಿಕ್ಸ್ ಗೆ ಭಾರತದ ಕ್ರೀಡಾಪಟುಗಳು ಸಿದ್ಧರಾಗಿದ್ದಾರೆ. ಆದ್ರೆ 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತಕ್ಕೆ ಟೋಕಿಯೋ ಒಲಿಂಪಿಕ್ಸ್ ನ ಎಲ್ಲಾ ಕ್ರೀಡೆಗಳಲ್ಲಿ ಕನಿಷ್ಠ ಭಾಗವಹಿಸುವ ಅರ್ಹತೆ ಕೂಡ ಸಿಕ್ಕಿಲ್ಲ. ಕೇವಲ ಬೆರಳೆಣಿಕೆಯಷ್ಟು ವಿಭಾಗದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಒಂದು ಚಿನ್ನದ ಪದಕ ಸಿಕ್ರೆ ಅದೇ ದೊಡ್ಡ ಸಾಧನೆ ಎಂಬಂತಾಗಿದೆ.
ಹೀಗಾಗಿ ಅನುರಾಗ್ ಠಾಕೂರ್ ಭಾರತೀಯ ಕ್ರೀಡಾರಂಗವನ್ನು ಉನ್ನತಮಟ್ಟಕ್ಕೆ ಬೆಳೆಸುವತ್ತ ದಿಟ್ಟ ಹೆಜ್ಜೆಯನ್ನಿಡಬೇಕಿದೆ.

Tags: #saakshatvAnurag ThakurbcciCricketdlehihimachalapradeshindiaindian sportspm narendra modiSportsTokyo Olympics 2021union sports minister
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram